ಬೆಂಗಳೂರು: ವಿಧಾನಸೌಧದ ಪೂರ್ವ ಭಾಗದ ಗುಮ್ಮಟದಲ್ಲಿ ಬಿರುಕು (Vidhana Soudha Dome Cracks) ಬಿಟ್ಟಿದ್ದು, ಸ್ಪೀಕರ್ ವೀಕ್ಷಿಸಿ, ಸಿಎಂ ಗಮನಕ್ಕೆ ತರುವುದಾಗಿ ಹೇಳಿದ್ದಾರೆ.
ಸ್ಪೀಕರ್ ಯುಟಿ ಖಾದರ್ (UT Khader) ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸಿಎಂ ಗಮನಕ್ಕೆ ತರುವುದಾಗಿಯೂ ಹೇಳಿದ್ದಾರೆ. ಗುಮ್ಮಟದಲ್ಲಿ ಸಣ್ಣ ಮಟ್ಟದ ಬಿರುಕು ಕಾಣಿಸಿದೆ. ಜೋರು ಮಳೆ (Heavy Rain) ಬಂದ ಸಂದರ್ಭದಲ್ಲಿ ನೀರು ಲೀಕೇಜ್ ಆಗುತ್ತಿದೆ ಎನ್ನಲಾಗಿದೆ. ಹೀಗಾಗಿ ಖುದ್ದು ಸ್ಪೀಕರ್ ಯು.ಟಿ ಖಾದರ್ ಪರಿಶೀಲನೆ ನಡೆಸಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧ ಕೇವಲ ರಾಜಕೀಯ ನಾಯಕರ ಕಟ್ಟಡ ಅಲ್ಲ. ಪ್ರವಾಸಿಗರ ಆಕರ್ಷಣೆಯ ಕೇಂದ್ರವೂ ಆಗಿದೆ. ಆದ್ರೆ ದೊಡ್ಡ ಕಟ್ಟಡಗಳನ್ನು ಸರಿಪಡಿಸುವಾಗ ಮತ್ತೊಂದು ಕಡೆ ಸ್ವಲ್ಪ ಹೆಚ್ಚು-ಕಡಿಮೆ ಆಗಬಹುದು. ಗುಮ್ಮಟ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಫ್ಲೋರ್ ಗಳು ಮಾತ್ರ ವ್ಯಾಪ್ತಿಗೆ ಬರುತ್ತದೆ. ಆದರೂ ಈ ವಿಚಾರವನ್ನು ಸಿಎಂ (CM Siddaramaiah) ಗಮನಕ್ಕೆ ತರುವುದಾಗಿ ಹೇಳಿದ್ದಾರೆ.
ಫ್ಲೋರ್ಗಳನ್ನು ಸರಿಪಡಿಸಿದ್ದೇನೆ. ಡಿಪಿಆರ್ ಹಾಗೂ ಲೋಕೋಪಯೋಗಿ ಇಲಾಖೆಯವರ ವ್ಯಾಪ್ತಿಗೆ ಗುಮ್ಮಟ ಬರುತ್ತದೆ. ಅವರ ಗಮನಕ್ಕೆ ತಂದು ಸರಿಪಡಿಸಲು ಹೇಳುತ್ತೇನೆ. ಇದು ಬಹಳ ವರ್ಷಗಳ ಹಳೆಯ ಕಟ್ಟಡ. ಕೆಲವೊಂದು ಲೋಪದೋಷ ಆಗಿರಬಹುದು. ಆದಷ್ಟು ಬೇಗ ಸರಿಪಡಿಸುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

















