ಮಂಡ್ಯ: ಹಲವು ವಂಚನೆ ಪ್ರಕರಣಗಳನ್ನು ಎದುರಿಸುತ್ತಿರುವ ಐಶ್ವರ್ಯ ಗೌಡಗೆ (Aishwarya Gowda)ಗೆ ಇಡಿ ಶಾಕ್ ನೀಡಿದೆ (ED Raid). ಮಂಡ್ಯದ (Mandya) ನಿವಾಸಕ್ಕೆ ಬೆಳ್ಳಂಬೆಳಗ್ಗೆ ಎಂಟ್ರಿಕೊಟ್ಟ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿ, ಹಲವು ಮಹತ್ವದ ದಾಖಲೆ ಪಡೆದಿದ್ದಾರೆ.
ಚಿನ್ನ ವಂಚನೆ ಪ್ರಕರಣದಿಂದ ಹೊರ ಬಂದ ಈ ಹೆಸರು ರಾಜಕಾರಣಿಗಳು ಹಾಗೂ ಸಿನಿಮಾ ನಟರ ಬುಡವನ್ನ ಅಲ್ಲಾಡಿಸಿತ್ತು. ಅದಾದ ಬಳಿಕ ಈಕೆಯ ವಿರುದ್ಧ ಹಲವು ವಂಚನೆ ಪ್ರಕರಣಗಳು ದಾಖಲಾಗಿದ್ದವು. ಇಂದು ಬೆಳ್ಳಂಬೆಳಗ್ಗೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲಿನಲ್ಲಿರುವ ಐಶ್ವರ್ಯಗೌಡ ನಿವಾಸಕ್ಕೆ ಐವರು ಇಡಿ ಅಧಿಕಾರಿಗಳ ತಂಡ ಎರಡು ಕಾರಿನಲ್ಲಿ ಬಂದು ದಾಳಿ ನಡೆಸಿವೆ. ಭದ್ರತೆಗೆ ಸಿಆರ್ಪಿಎಫ್ ಯೋಧರನ್ನು ಕರೆ ತರಲಾಗಿತ್ತು. ಸಿಆರ್ ಪಿಎಫ್ ಸೆಕ್ಯೂರಿಟಿಯಿಂದ ಮನೆ ತಲಾಶ್ ಮಾಡಿದ್ದಾರೆ.
ಚಿನ್ನ ವಂಚನೆ, ಮನಿ ಡಬ್ಲಿಂಗ್, ಸೈಟ್ ವಂಚನೆ ಸೇರಿ ಐಶ್ವರ್ಯಗೌಡ ಮೇಲೆ ಹಲವು ಆರೋಪಗಳಿವೆ. ಈ ಎಲ್ಲಾ ಪ್ರಕರಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗಿರುವುದು ಕಂಡು ಬಂದಿರುವ ಕಾರಣ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಶ್ವರ್ಯ ಗೌಡಳ ವ್ಯವಹಾರದ ಇಂಚಿಂಚು ಮಾಹಿತಿಯನ್ನು ಇಡಿ ಅಧಿಕಾರಿಗಳು ಕಲೆಯಾಕಿದ್ದು, ದಾಳಿ ವೇಳೆ ಹಲವು ಮಹತ್ವದ ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ.