ಚಿಕ್ಕಮಗಳೂರು: ಮಾಜಿ ಸಚಿವ ಹಾಗೂ ವಿಪ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ್ದ 100ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರ (BJP Activist) ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಚಿಕ್ಕಮಗಳೂರು ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ದೇವರಾಜ್ ಶೆಟ್ಟಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಸೇರಿದಂತೆ ಹಲವರ ವಿರುದ್ಧ ಬಸವನಹಳ್ಳಿಯಲ್ಲಿ 5 ಹಾಗೂ ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಅನುಮತಿ ಇಲ್ಲದೆ ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಿದ್ದು, ಬೈಕ್, ಟೈರ್ ಸುಟ್ಟಿದ್ದು, ಹೆದ್ದಾರಿ ತಡೆ, ಸಾರ್ವಜನಿಕರ ಶಾಂತಿಗೆ ಭಂಗ ಮತ್ತು ಪ್ರತಿಭಟನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಟ್ಟ ಆರೋಪದಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.