ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಗೆ ಅಖಾಡ ಸಜ್ಜಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ವರುಣಾಗಮನದ ಸುಳಿವು ನೀಡಿದೆ. ಮುಂದಿನ ಒಂದು ವಾರ ರಾಜಧಾನಿಯಲ್ಲಿ ಭಾರೀ ವರ್ಷಧಾರೆಯ ಮುನ್ಸೂಚನೆ ಸಿಕ್ಕಿದೆ.
ಗುಡುಗು ಸಹಿತ ದೊಡ್ಡ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಅಂತಾ ಹವಾಮಾನ ಇಲಾಖೆ ಸುಳಿವು ನೀಡಿದೆ. ಬೆಂಗಳೂರು ಗ್ರಾಮಾಂತರವೂ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಏಪ್ರಿಲ್ ಬಿಸಿಲಿಗೆ ಬಸವಳಿದಿರುವ ಮಂದಿಗೆ ವರುಣಾಗಮನದ ಸುದ್ದಿ ನಿಜಕ್ಕೂ ಸಂತಸ ತಂದಿದೆ.