ಕೋಲಾರ : ಅಪ್ಪ ಮುಂದುವರೆದರೆ ತನ್ನ ಜೋಳಿಗೆ ತುಂಬುತ್ತೆ ಅಂದುಕೊಂಡಿದ್ದಾರೆ. ಸಿದ್ದರಾಮಯ್ಯ ಮಗನಿಂದ ಅಷ್ಟೇ ಅಲ್ಲ, ಹಲವರಿಂದ ಈ ರೀತಿ ಹೇಳಿಸುತ್ತಿದ್ದಾರೆ. ಹಾಗೆ ಹೇಳಿ ಕೆಲವರ ಮಂತ್ರಿ ಪದವಿಯೇ ಹೋಗಿದೆ ಎಂದು ಯತೀಂದ್ರ ಹೇಳಿಕೆಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.
ಕೋಲಾರ ಜಿಲ್ಲೆಯ ಕೆಜಿಎಫ್ನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವರದಿಗಾರರೊಂದಿಗೆ ಮಾತನಾಡುತ್ತಾ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಎತ್ತಿಕಟ್ಟುತ್ತಿದ್ದಾರೆ. ಹೀಗೆ ಹಲವರನ್ನು ಎತ್ತು ಕಟ್ಟುತ್ತಿರುತ್ತಾರೆ.
ಪಂಚ ಗ್ಯಾರಂಟಿ ವಿಚಾರವಾಗಿ ವ್ಯಂಗ್ಯ
ನಿನ್ನ ಹೆಂಡತಿಗೂ ಪ್ರೀ ಅಂತ ಹೇಳಿ ಬರೀ ತಮಟೆ ಹೊಡೆಯುತ್ತಿದ್ದಾರೆ. ಹಾಲಿನ ಬಿಲ್ ಜಾಸ್ತಿ ಆಯ್ತು, ಬಸ್ ವ್ಯವಸ್ಥೆ ಹಾಳಾಯ್ತು, ಗೃಹ ಲಕ್ಷ್ಮಿ ಹಣ ಬರ್ತಿಲ್ಲ ಹೀಗೆ ರಾಜ್ಯದ ಅರ್ಥ ವ್ಯವಸ್ಥೆ ಹಾಳುಮಾಡಿ ಎಂಟು ಲಕ್ಷಕೋಟಿ ಸಾಲ ಮಾಡಿದ ಕುಖ್ಯಾತಿ ಸಿದ್ದರಾಮಯ್ಯ ಅವರಿಗಿದೆ. ಹದಿನಾರು ಬಾರಿ ಬಜೆಟ್ ಮಂಡಿಸಿದ ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ ಸತ್ತ ಸರ್ಕಾರದ ಮುಖ್ಯಮಂತ್ರಿ. ಸರ್ಕಾರ ಸತ್ತುಹೋಗಿದೆ, ಸತ್ತ ಸರ್ಕಾರದ ಹೆಣವನ್ನು ಸಿದ್ದರಾಮಯ್ಯ ಮುಂದೆ ಡಿಕೆಶಿ ಹಿಂದೆ ಹೊರುತ್ತಿದ್ದಾರೆ. ಆದರೆ ಯಾರೇ ಹೊರಲಿ ಸರ್ಕಾರ ಮಾತ್ರ ಸತ್ತೋಗಿದೆ. ಎಂದಿದ್ದಾರೆ.
ಸರ್ಕಾರವನ್ನು ತೊಲಗಿಸಲು ರಾಜ್ಯದ ಜನರು ತೀರ್ಮಾನ ಮಾಡಿದ್ದಾರೆ. 140 ಸೀಟು ಕೊಟ್ಟ ಜನರು ಮಾಡಿದ ತಪ್ಪಿಗೆ, ಜನರೇ ಅನುಭವಿಸಬೇಕು. ಮೈಮರೆತ ನಾವು ಬಿಜೆಪಿಯವರು ಅನುಭವಿಸಬೇಕು.
ಕೇಂದ್ರದ ವಿತ್ತ ಸಚಿವರನ್ನು ಸಿದ್ದು ಏಕವಚನದಲ್ಲಿ ಸಂಭೋಧನೆಗೆ ಖಂಡನೆ
ನೀವು ಒಬ್ಬ ಹಣಕಾಸು ಸಚಿವರಾಗಿ ಕೇಂದ್ರದ ಹಣಕಾಸು ಸಚಿವರ ಹೆಸರು ಗೊತ್ತಿಲ್ಲವೇ, ಗೊತ್ತಿದ್ದರೂ ಈ ರೀತಿ ಉಢಾಪೆ ಮಾತಾಡಿದ್ರಾ. ನಾವು ನಿಮ್ಮನ್ನ ಯಾವೊನೋ ಅವನು, ಮೂಡಾದಲ್ಲಿ ಹೆಂಡತಿ ಹೆಸರಲ್ಲಿ 14 ಸೈಟ್ ಹೊಡೆದೋನು ಯಾವೋನೋ, ಅಂದರೆ ನಿಮಗೆ ಹೇಗಾಗುತ್ತೆ. ಕೇಂದ್ರ ಸಚಿವೆ ಹೆಣ್ಣು ಮಗಳ ಬಗ್ಗೆ ಹೀಗೆ ಮಾತಾಡಿ ಸಮಾಜಕ್ಕೆ ಯಾವ ಮೇಲ ಪಂಕ್ತಿ ಹಾಕಿ ಕೊಡುತ್ತಿದ್ದೀರಿ. ದ್ವೇಷ ಬಾಷಣ ಬಿಲ್ ಪಾಸ್ ಆದರೆ ಮೊದಲ ಪ್ರಕರಣ ಸಿದ್ದರಾಮಯ್ಯ ಅವರ ಮೇಲೆ ಹಾಕಬೇಕು. ದೇಶದ ಹೆಣ್ಣು ಮಗಳ ಬಗ್ಗೆ ಅಗೌರವ ತೋರಿರುವ ಸಿದ್ದರಾಮಯ್ಯ ಮೇಲೆ ಕೇಸ್ ದಾಖಲು ಮಾಡಬೇಕು. ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ : ಸಿಎಂ ಇನ್ನಾದರೂ ದ್ವೇಷ ರಾಜಕಾರಣ ಬದಿಗಿಟ್ಟು, ಕೇಂದ್ರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು | ಬಿವೈವಿ



















