ಬೆಂಗಳೂರು : ತೆಲುಗು ಸ್ಟಾರ್ ಅಡವಿ ಶೇಷ್ ಮತ್ತು ಮೃಣಾಲ್ ಠಾಕೂರ್ ಅಭಿನಯದ ತೆಲುಗು ಚಿತ್ರ ‘ಡಕಾಯತ್’, ಏಪ್ರಿಲ್.10ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಹಿಂದಿ ಹಾಗೂ ತೆಲುಗು ಭಾಷೆಯಲ್ಲಿ ಬಿಡುಗಡೆ ಆಗಿರೋ ಡಕಾಯತ್ ಸಿನಿಮಾ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.

ಚಿತ್ರದ ಪ್ರಚಾರಕ್ಕಾಗಿ ಅಡವಿ ಶೇಷ್ ಮತ್ತು ಅನುರಾಗ್ ಕಶ್ಯಪ್, ಶನಿವಾರ ಬೆಂಗಳೂರಿಗೆ ಬಂದಿದ್ದರು. ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವುದಕ್ಕೆ ಪ್ರೇಕ್ಷಕರಿಗೆ ಧನ್ಯವಾದಗಳನ್ನು ತಿಳಿಸುತ್ತಲೇ, ಚಿತ್ರವನ್ನು ಪ್ರಚಾರ ಮಾಡಿದರು.

ತಮ್ಮ ಪ್ರತಿ ಸಿನಿಮಾಗೂ ಕನ್ನಡಿಗರು ಸಪೋರ್ಟ್ ಮಾಡಿದ್ದು, ತಾವು ಅಭಿನಯಿಸಿದ ಬಹುತೇಕ ಸಿನಿಮಾದ ಪ್ರಚಾರವನ್ನ ಬೆಂಗಳೂರಿನಲ್ಲಿ ಮಾಡಿರುವುದಾಗಿ ಅಡವಿ ಶೇಷ್ ಖುಷಿಯಿಂದ ಹೇಳಿಕೊಂಡರು. ಇನ್ನು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ತಿಂಡಿ ಸವಿದು ಅಭಿಮಾನಿಗಳ ಜೊತೆ ಒಂದಿಷ್ಟು ಸಮಯ ಕಾಲ ಕಳೆದರು. ಆದಾದ ನಂತರ ಸುದ್ದಿಗೋಷ್ಟಿ ಮಾಡಿ ಮಾಧ್ಯಮದ ಮೂಲಕ ಸಿನಿಮಾ ನೋಡಿ ಸಪೋರ್ಟ್ ಮಾಡಿದ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು.
ನಟ, ನಿರ್ದೇಶಕ, ನಿರ್ಮಾಪಕ ಅನುರಾಗ್ ಕಶ್ಯಪ್ ಮಾತನಾಡಿ ‘ಈಗ ನಾನು ಬೆಂಗಳೂರಿನವನೇ.. ನನ್ನನ್ನು ಸ್ವಾಗತ ಮಾಡುವ ಅವಶ್ಯಕತೆ ಇಲ್ಲ’ ಎಂದರು. ಡಕಾಯತ್ ಸಿನಿಮಾ 50 ಕೋಟಿ ಕಲೆಕ್ಷನ್ ಮಾಡಿದೆ ಟ್ರೇಲರ್ ನೋಡಿದ್ರೆ ಮಾಸ್ ಸಿನಿಮಾ ಅನ್ಸುತ್ತೆ, ಆದ್ರೆ ಇದೊಂದು ಒಳ್ಳೆ ಲವ್ ಸ್ಟೋರಿ ಸಿನಿಮಾ, ಬೆಂಗಳೂರಿನ ಜನತೆ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದೀರ ನಮಗೆ ಖುಷಿ ಇದೆ ಎಂದರು.
ನಂತರ ಜಿಟಿ ಮಾಲ್ ನಲ್ಲಿ ಸಿನಿಮಾ ನೋಡಲು ಬಂದ ಜನರನ್ನ ಅಡವಿ ಶೇಷ್ ಹಾಗೂ ಅನುರಾಗ್ ಕಶ್ಯಪ್ ಬೇಟಿ ಮಾಡಿ ಖುಷಿ ಪಟ್ಟರು. ಡಕಾಯತ್ ಚಿತ್ರದಲ್ಲಿ ಅಡವಿ ಶೇಷ್, ಮೃಣಾಲ್ ಠಾಕೂರ್, ಅನುರಾಗ್ ಕಶ್ಯಪ್, ಪ್ರಕಾಶ್ ರಾಜ್, ಸುನೀಲ್, ಅತುಲ್ ಕುಲಕರ್ಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಶನೀಲ್ ಡಿಯೋ ನಿರ್ದೇಶನ ಮಾಡಿದ್ದಾರೆ.
ಇದನ್ನೂ ಓದಿ : ಸಾಲಗಾರರ ಕಿರುಕುಳ – ಕುಡಿದು ಮೊಬೈಲ್ ಟವರ್ ಏರಿದ ಭೂಪ!



















