ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ (Renukaswamy Murder Case) ಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್ ಗೆ ದರ್ಶನ್ (Darshan) ಸೇರಿದಂತೆ ಎಲ್ಲ 17 ಆರೋಪಿಗಳು ಹಾಜರಾಗಲಿದ್ದಾರೆ.
ನಗರದ 57ನೇ ಸಿಸಿಹೆಚ್ ಕೋರ್ಟ್ಗೆ ಹಾಜರಾಗಲಿದ್ದಾರೆ. ಈಗಾಗಲೇ ಪ್ರಕರಣದ ಆರೋಪಿಗಳಿಗೆ ಜಾಮೀನು (Bail) ಸಿಕ್ಕಿದೆ. ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ (Court) ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಎಲ್ಲರೂ ಕೋರ್ಟ್ಗೆ ಹಾಜರಾಗುತ್ತಿದ್ದಾರೆ.
ಹಿಂದಿನ ಬಾರಿ ಕೋರ್ಟ್ ಗೆ ಹಾಜರಾಗಿದ್ದ ವೇಳೆ ಪವಿತ್ರಗೌಡ (Pavithra Gowda)ರನ್ನು ದರ್ಶನ್ ಮಾತನಾಡಿರಲಿಲ್ಲ. ಇಂದು ಕೂಡ ಇಬ್ಬರೂ ಸೇರಲಿದ್ದು, ದರ್ಶನ್ ಮಾತನಾಡಿಸುತ್ತಾರಾ? ಎಂಬುವುದನ್ನು ಕಾಯ್ದು ನೋಡಬೇಕಿದೆ. ದರ್ಶನ್ ಈಗಾಗಲೇ ಶೂಟಿಂಗ್ ನಲ್ಲಿ ಭಾಗಿಯಾಗುತ್ತಿದ್ದು, ಅಭಿಮಾನಿಗಳಿಗೆ ಸಂತಸ ತಂದಿದೆ.



















