ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಸೋಮವಾರ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಫಿಕ್ಸ್ ಆಗಿದೆ.
ಕಾಂಗ್ರೆಸ್ ಹೈಕಮಾಂಡ್ ಅಂತಿಮ ಹಂತದ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಸೋಮವಾರ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಪ್ರಮಾಣವಚನಕ್ಕೆ ಲೋಕಭವನದಲ್ಲಿ ಸಿದ್ಧತೆ ಮಾಡಿಕೊಳ್ಳಲು ಸಿಎಂ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.
ನಾಳೆ (ಆ.2) ನೂತನ ಸಚಿವರ ಪಟ್ಟಿ ಸಿಎಂ ಡಿಕೆಶಿ ಕೈ ಸೇರಲಿದ್ದು ಸೋಮವಾರ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಫಿಕ್ಸ್ ಎನ್ನಲಾಗಿದೆ. 18 ಕ್ಕೂ ಹೆಚ್ಚು ಸಚಿವರು ಪ್ರಮಾಣವಚನ ಸ್ವೀಕರಿಸಲಿರುವ ಸಾಧ್ಯತೆ ಇದೆ.
ಈಗಾಗಲೇ ಹೈಕಮಾಂಡ್ಗೆ ಸಿದ್ದರಾಮಯ್ಯ, ಡಿಕೆಶಿ ಪಟ್ಟಿ ಇಬ್ಬರೂ ಪ್ರತ್ಯೇಕ ಪಟ್ಟಿ ನೀಡಿದ್ದು, ಭಾನುವಾರ ಸಂಜೆ ಹೊತ್ತಿಗೆ ಅಂತಿಮ ಪಟ್ಟಿ ತಲಪುವ ಸಾಧ್ಯತೆಗಳಿವೆ. ಮೂಲಗಳ ಪ್ರಕಾರ, ಖಾಲಿ ಇರುವ 20 ಸ್ಥಾನಗಳ ಪೈಕಿ, 18 ಸ್ಥಾನಗಳು ಭರ್ತಿಯಾಗೋ ಸಾಧ್ಯತೆಗಳಿವೆ.



















