ಚಿಕ್ಕಮಗಳೂರು : ಕರ್ನಾಟಕದ ಅಯೋಧ್ಯೆ ಎಂದೇ ಖ್ಯಾತಿಯಾಗಿರುವ ದತ್ತಪೀಠದಲ್ಲಿ ನವೆಂಬರ್ 26ರಿಂದ ಡಿಸೆಂಬರ್ 4ರವರೆಗೆ ದತ್ತಜಯಂತಿ ನಡೆಯಲಿದೆ. ಹೀಗಾಗಿ ಭಕ್ತರು ಲಾಂಗ್ ಚಾರ್ಸಿ ಗಾಡಿ ತಂದರೆ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ. ಅಲ್ಲದೇ ವರ್ಷಪೂರ್ತಿ ಸುರಿದ ಮಳೆಯಿಂಸ ಗಿರಿ ಭಾಗದಲ್ಲಿ ಅಲ್ಲಲ್ಲಿ ರಸ್ತೆ ಬದಿ ಮಣ್ಣು ಕುಸಿದಿದೆ. ಇದರಿಂದ ಮುಂಜಾಗೃತ ಕ್ರಮವಾಗಿ ಡಿಸೆಂಬರ್ 1ರಿಂದ 5ರವರೆಗೆ ಲಾಂಗ್ ಚಾರ್ಸಿ ಗಾಡಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
35 ಆಸನಗಳಿಗಿಂತ ಹೆಚ್ಚು ಸೀಟ್ ಇರುವ ಎಲ್ಲಾ ರೀತಿಯ ವಾಹನಗಳನ್ನು ನಿಷೇಧಿಸಲಾಗಿದ್ದು, ಪೊಲೀಸ್-ಅಗ್ನಿಶಾಮಕ ವಾಹನಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ತಿಳಿಸಲಾಗಿದೆ.
ಡಿಸೆಂಬರ್ 2ರಂದು ಅನುಸೂಯ ಜಯಂತಿ, 3ರಂದು ಬೃಹತ್ ಶೋಭಾಯಾತ್ರೆ, 4ರಂದು 20 ಸಾವಿರ ಭಕ್ತರಿಂದ ದತ್ತಪಾದುಕೆ ದರ್ಶನ ನಡೆಯಲಿದೆ.
ಇದನ್ನೂ ಓದಿ : ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ತೇಜಸ್ವಿ ಯಾದವ್ ಆಯ್ಕೆ



















