ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಜೆಡಿಎಸ್ ಟೀಕಾ ಪ್ರಹಾರ ನಡೆಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಹೈಕಮಾಂಡ್ ಗುಲಾಮನಾಗಿ ಕಪ್ಪ ಕಳುಹಿಸುವ ಕಲೆಕ್ಷನ್ ಏಜೆಂಟ್, ಬಂಡೆ ಕಳ್ಳನ ರಾಜಕೀಯ ಭ್ರಷ್ಟಾಚಾರದ ಇತಿಹಾಸವನ್ನು ಸಂಪುಟಗಳಲ್ಲಿ ಪ್ರಕಟಿಸಬಹುದು ಎಂದು ಕೆಟ್ಟ ಪದಗಳನ್ನು ಬಳಕೆ ಮಾಡಿದೆ.
ಅಲ್ಲದೇ ಡಿ.ಕೆ. ಶಿವಕುಮಾರ್ ಫೋಟೋ ಇರುವ ಪೋಸ್ಟರ್ ಪೋಸ್ಟ್ ಮಾಡಿ ವ್ಯಂಗ್ಯವಾಡಿದೆ. ಹೊಡಿಬಡಿ ಸಂಸ್ಕೃತಿಯ ರಿಯಲ್ ಎಸ್ಟೇಟ್ ದಂಧೆಕೋರ , ಹವಾಲಾ ಮಾಫಿಯಾ , ಭೂಗಳ್ಳ @ ಸಿಡಿ ಶಿವುನ ಆಸ್ತಿ ಸಂಪಾದನೆಯ ಗುಟ್ಟು ಇಡೀ ದೇಶಕ್ಕೆ ಚಿರಪರಿಚಿತ. ಬೇನಾಮಿ ಆಸ್ತಿ, ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ರೌಡಿ ಕೊತ್ವಾಲನ ಶಿಷ್ಯ ಒಂದು ಕೈ ಮೇಲು ಎಂದು ಗಂಭೀರವಾಗಿ ಜೆಡಿಎಸ್ ಆರೋಪಿಸಿದೆ.
ಅಲ್ಲದೇ, ಸೋಲಾರ್ ಪಾರ್ಕ್ ಯೋಜನೆಯಲ್ಲಿ ಎತ್ತುವಳಿ ಮಾಡಿದ್ದು ಎಷ್ಟು? ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ದೋಚುತ್ತಿರುವ ಕಲೆಕ್ಷನ್ ಗಿರಾಕಿಯ ಘೋಷಿತ 1,413 ಕೋಟಿ ರೂ. ಆಸ್ತಿ ಗಳಿಕೆಯ ಸಿಕ್ರೇಟ್ ಇವೇ ಅಲ್ಲವೇ? ಎಂದು ವ್ಯಂಗ್ಯವಾಡಿದೆ.