ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ತೆರಳುತ್ತಿದ್ದು, ಕುತೂಹಲ ಕೆರಳಿಸಿದೆ.
ನಾಳೆ ಕೃಷ್ಣಾ ನದಿ ನೀರಿನ ಹಂಚಿಕೆ ವಿಚಾರವಾಗಿ ನಡೆಯಲಿರುವ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಹೀಗಾಗಿಯೇ ಡಿಸಿಎಂ ದೆಹಲಿಗೆ ತೆರಳುತ್ತಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರು ಆಹ್ವಾನಿಸಿರುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಕರ್ನಾಟಕ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳ ಜಲ ಸಂಪನ್ಮೂಲ ಸಚಿವರು ಭಾಗಿಯಾಗಲಿದ್ದಾರೆ.