ಸಂಸದ ಶಶಿ ತರೂರ್ ವಿರುದ್ಧ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಸಲ್ಲಿಸಿದ್ದ ಮಾನನಷ್ಟ ಆರೋಪದಡಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ದೆಹಲಿ ನ್ಯಾಯಾಲಯ ಇಂದು ವಜಾಗೊಳಿಸಿದೆ.
ರಾಜೀವ್ ಚಂದ್ರಶೇಖರ್ ಸಲ್ಲಿಸಿರುವ ಅರ್ಜಿಯಲ್ಲಿ ಮಾನನಷ್ಟ ಅಂಶಗಳಿಲ್ಲ. ಹಾಗಾಗಿ ತರೂರ್ ಅವರು ವಿಚಾರಣೆಗೆ ಹಾಜರಾಗುವ ಅಗತ್ಯತೆ ಇಲ್ಲ’ ಎಂದು ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಪರಾಸ್ ದಲಾಲ್ ಅಭಿಪ್ರಾಯಪಟ್ಟಿದ್ದಾರೆ. ತರೂರ್ ಅವರು 2024ರ ಏಪ್ರಿಲ್ನಲ್ಲಿ ಸಾರ್ವಜನಿಕವಾಗಿ ಹಲವು ವೇದಿಕೆಗಳಲ್ಲಿ ಆಡಿರುವ ಮಾತುಗಳು ಮಾನಹಾನಿಕರವಾಗಿ ಇದ್ದವು. ಎಂದು ರಾಜೀವ್ ಕೋರ್ಟ್ ಮೊರೆ ಹೋಗಿದ್ದರು.
ಮಾನಹಾನಿಕರ ರೀತಿಯಲ್ಲಿ ಮಾತನಾಡದಂತೆ ತರೂರ್ ಅವರಿಗೆ ಸೂಚಿಸಬೇಕು ಎಂದು ರಾಜೀವ್ ಅವರು ಕೋರಿದ್ದರು. ತರೂರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. 10 ಕೋಟಿ ರೂಪಾಯಿ ಪರಿಹಾರ ಕೊಡಬೇಕು ಎಂದು ಕೂಡ ರಾಜೀವ್ ಕೋರಿದ್ದರು.
2024ರ ಲೋಕಸಭಾ ಚುನಾವಣೆಯಲ್ಲಿ ರಾಜೀವ್ ಅವರು ಮತದಾರರಿಗೆ ಹಣ ನೀಡಿದ್ದರು ಎಂದು ತರೂರ್ ಅವರು ಸುದ್ದಿವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದರು ಎಂಬ ಆರೋಪ ಇದೆ.