ಬೆಂಗಳೂರು: ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತವಾಗಿದ್ದರಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ.
ಟ್ರಫ್ ಈಗ ದಕ್ಷಿಣ ಗುಜರಾತ್ನಿಂದ ಕರ್ನಾಟಕ ಹಾಗೂ ಕೇರಳ ತೀರದವರೆಗೆ ಇದೆ. ಈ ಕಾರಣದಿಂದಾಗಿ ರಾಜ್ಯದಲ್ಲಿ ರಾಜ್ಯದಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ವಿಜ್ಞಾನಿ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುರಿದ ಭಾರೀ ಮಳೆಗೆ ವಾಹನ ಸವಾರರು ಪರದಾಡಿದ್ದರು. ಈ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ. ಆಗಸ್ಟ್ 30 ರಿಂದಲೂ ಸೆಪ್ಟೆಂಬರ್ 3 ರ ವರೆಗೆ ಮಳೆಯಾಗಲಿದೆ ಎಂದು ಸಿಎಸ್ ಪಾಟೀಲ್ ಹೇಳಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 30 ರಿಂದ ಸೆಪ್ಟೆಂಬರ್ 3 ರವರೆಗೆ ವ್ಯಾಪಕವಾಗಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಗೆ ಆರೆಂಜ್ ಅಲರ್ಟ್ ಹಾಗೂ ನಾಳೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್ ಬಿಜಾಪುರ ಹಾಗೂ ಕೊಡಗು ಜಿಲ್ಲೆಯ ಹಲವು ಕಡೆ ಮಳೆಯಾಗಲಿದ್ದು, ಆಗಸ್ಟ್ 30 ಹಾಗೂ 31 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಮಳೆ ಜೊತೆಗೆ ನಿರಂತರ ಗಾಳಿಯ ವೇಗ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಷ್ಟ್ 30 ಹಾಗೂ 31 ರಂದು ಹಲವು ಕಡೆ, ಸಪ್ಟೆಂಬರ್ 1 , 2 ಹಾಗೂ 3 ರಂದು ಮಳೆಯಾಗುವ ಮುನ್ಸೂಚನೆಯನ್ನು ನೀಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಭಾರೀ ಹಾಗೂ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಆ.30 ಹಾಗೂ 31 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.