ಬೆಳ್ತಂಗಡಿ: ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.ಐ ತಂತ್ರಜ್ಞಾನವನ್ನು ಬಳಸಿಕೊಂಡು ವಿಡಿಯೋ ಸೃಷ್ಟಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರ ಕರಣದ ಆರೋಪಿತ ಯೂಟ್ಯೂಬರ್ ಸಮೀರ್.ಎಂ.ಡಿ. ಅವರಿಗೆ ಸಂಬಂಧಿಸಿದಂತೆ ಬೆಂಗಳೂರು ನಿವಾಸಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ 2 ಬಾರಿ ವಿಚಾರಣೆಗೆ ಹಾಜರಾಗಿದ್ದ ʼದೂತʼ ಯೂಟ್ಯೂಬ್ ಚಾನೆಲ್ ಸಂಪಾದಕ ಸಮೀರ್ ಎಂ.ಡಿ. ಬಳಿಕ ಸಮರ್ಪಕವಾಗಿ ತನಿಖೆಗೆ ಸಹಕರಿಸುತ್ತಿಲ್ಲ ಎನ್ನಲಾಗಿದೆ. ಈ ಹಿನ್ನಲೆ ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಹಾಗೂ ಅವರ ನೇತೃತ್ವದ ತಂಡ ಎಫ್.ಎಸ್.ಎಲ್. ವಿಭಾಗದ ಸೋಕೊ ಸಿಬಂದಿ ಜತೆಯಲ್ಲಿ ಸೆ.4 ರಂದು ಮಾದ್ಯಾಹ್ನ 1:40 ಕ್ಕೆ ಸರಿಯಾಗಿ ಬೆಂಗಳೂರಿನ ಬನ್ನೇರುಘಟ್ಟದ ಹುಳ್ಳಹಲ್ಲಿಯಲ್ಲಿರುವ ಸಮೀರ್ ನ ಬಾಡಿಗೆ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದು ತೆರಳಿದ್ದ ತಂಡ ದಾಳಿ ವೇಳೆ ಎ.ಐ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಆತನ ಮನೆಯಿಂದ ಜಪ್ತಿ ಮಾಡುವ ಸಾಧ್ಯತೆ ಇದೆ ಎಂದು ಸುದ್ದಿ ಮೂಲಗಳು ಮಾಹಿತಿ ನೀಡಿವೆ.
ಸಮೀರ್ ತನಿಖೆ ವೇಳೆ ನನಗೆ ಅಲ್ಲಿ ನಡೆದ ಘಟನೆ ಬಗ್ಗೆ ತಿಳಿಸಿದಂತೆ ಎ.ಐ ವಿಡಿಯೋ ರಚಿಸಿದ್ದೆ. ಈ ಬಗ್ಗೆ ನನಗೆ ಸ್ಪಷ್ಟನೆ ಇ ಲ್ಲ ಎಂದಿದ್ದ. ಮತ್ತೊಂದೆಡೆ ವಿಡಿಯೋ ಪ್ರಸಾರದ ಮುನ್ನ ಅದರಲ್ಲಿ ಡಿಸ್ಕ್ಲೈಮರ್ ಹಾಕಿಯೇ ಹಾಕಿರುವುದಾಗಿ ಹೇಳಿಕೆ ನೀಡಿದ್ದ. ಬಳಿಕ ಈತ ತನಿಖೆಗೆ ಸೂಕ್ತ ಸ್ಪಂದನೆ ನೀಡದ ಕಾರಣ ಆತನ ಮನೆ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.


















