ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆ ನಡೆಸುತ್ತಿರುವುದರ ನಡುವೆ ಘರ್ಷಣೆ ನಡೆದ ಬೆನ್ನಲ್ಲೇ ಸಾಕ್ಷಿ ದೂರುದಾರ ಈಗ ಗನ್ ಮ್ಯಾನ್ ಭದ್ರತೆಯನ್ನು ಕೇಳಿರುವ ವಿಚಾರ ಬೆಳಕಿಗೆ ಬಂದಿದೆ.
ಹೌದು, ಬುಧವಾರ ಸಂಜೆ ಧರ್ಮಸ್ಥಳದಲ್ಲಿ ನಡೆದ ಘರ್ಷಣೆಯ ಬಳಿಕ ದೂರುದಾರನಿಂದ ಈ ವಿಶೇಷ ಮನವಿ ಬಂದಿದೆ. ನನ್ನ ಮೇಲೂ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಗನ್ಮ್ಯಾನ್ ನೀಡಬೇಕೆಂದು ಮನವಿ ಮಾಡಿದ್ದಾನೆ. ರಕ್ಷಣೆ ಕೋರಿ ಸಾಕ್ಷಿ ದೂರುದಾರ ಬೇಡಿಕೆ ಇಟ್ಟಿದ್ದಾನೆ. ಈಗಾಗಲೇ ಆತ ಯಾರೆಂದು ತಿಳಿದಂತೆ ಎಲ್ಲಾ ಸುರಕ್ಷತಾ ಕ್ರಮವನ್ನು ಎಸ್.ಐ.ಟಿ ತಂಡ ತೆಗೆದುಕೊಂಡಿದೆ. ಕಾನೂನಿನ ಅನ್ವಯವೇ ಎಲ್ಲಾ ತನಿಖಾ ಪ್ರಕ್ರಿಯೆ ನಡೆಯುತ್ತಿದೆ.
ಗುರುವಾರದ ವಿಚಾರಣೆಯ ಸಂದರ್ಭದಲ್ಲಿ ದೂರುದಾರನ ಪರ ವಕೀಲರು ವಿಶೇಷ ತನಿಖಾ ತಂಡಕ್ಕೆ ಗನ್ಮ್ಯಾನ್ ನೀಡಬೇಕೆಂದು ಲಿಖಿತ ಮನವಿ ಮಾಡಿದ್ದಾರೆ.
ಶೋಧ ಮುಕ್ತಾಯದ ನಂತರವೂ ನನಗೆ ಗನ್ ಮ್ಯಾನ್ ಭದ್ರತೆ ನೀಡಬೇಕೆಂದು ಎಸ್ಐಟಿ ಎಸ್ಪಿ ಜಿತೇಂದ್ರ ದಯಾಮ್ ಮುಂದೆ ಒತ್ತಾಯ ಮಾಡಿದ್ದಾನೆ ಎನ್ನಲಾಗಿದೆ.
ಸದ್ಯ, ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ದೂರುದಾರನನ್ನು ಕರೆ ತರಲಾಗಿದೆ. ದೂರುದಾರ ಆಗಮಿಸಿದ ಖಾಸಗಿ ಕಾರಿನ ಮುಂದೆ ಪೊಲೀಸರು ಕಾವಲು ಕಾಯುತ್ತಿದ್ದಾರೆ. ಪೊಲೀಸ್ ವಾಹನದಲ್ಲಿದ್ದ ಚಾಲಕ ಸಹಿತ ಇಬ್ಬರು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.