ಮಂಗಳೂರು : ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಆರೋಪಿ ಚಿನ್ನಯ್ಯನಿಗೆ ಜಾಮೀನು ಸಿಕ್ಕಿದೆ.
ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ ಬೆನ್ನಲ್ಲೇ ಆರೋಪಿ ಚಿನ್ನಯ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರು ಜಿಲ್ಲಾ ನ್ಯಾಯಾಲಯ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಶವಗಳನ್ನು ಹೂತಿಟ್ಟ ಕೇಸ್ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯ ಬಂಧನವಾಗಿತ್ತು. ಸೆಪ್ಟೆಂಬರ್ 6ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು. ಇದೀಗ 1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ : ED ಅಧಿಕಾರಿಗಳ ಸೋಗಿನಲ್ಲಿ ಬಂದು 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು!



















