ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಎಸ್.ಐ.ಟಿ ಮಹಜರಿಗೆ ಕರೆದೊಯ್ದಿದ್ದಾರೆ.
ಆತ ವಾಸವಿದ್ದ ಸ್ಥಳಗಳಲ್ಲಿ, ಆತ ಕಾರ್ಯ ನಿರ್ವಹಿಸಿದ್ದ ಸ್ಥಳಗಳಲ್ಲಿ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕಾದ ಅಗತ್ಯವಿದ್ದು, ಇಂದು(ಶನಿವಾರ, ಆ.30) ಬೆಳಗ್ಗೆ 6 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಆತನನ್ನು ಕರೆದುಕೊಂಡು ಹೋಗಿರುವುದು ಎಲ್ಲಿಗೆ ಎಂಬ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.


















