ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ದೂರುದಾರ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದ್ದು, ಈತನ ಕುರಿತು ಮಾಹಿತಿ ಸಂಗ್ರಹಿಸಲು ಮಂಡ್ಯ ಹಾಗೂ ತಮಿಳುನಾಡಿಗೆ ಭೇಟಿ ನೀಡಿದೆ ಎಂದು ತಿಳಿದುಬಂದಿದೆ.
ಪ್ರಕರಣದ ಸಾಕ್ಷಿ ಹಾಗೂ ದೂರುದಾರ ವ್ಯಕ್ತಿ ಮಂಡ್ಯ ಹಾಗೂ ತಮಿಳುನಾಡಿನಲ್ಲಿ ವಾಸವಿದ್ದ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳ ತಂಡ ಮಂಡ್ಯ ಮತ್ತು ತಮಿಳುನಾಡಿಗೆ ಭೇಟಿ ನೀಡಿ, ಈತನ ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸುತ್ತಿದೆ ಎಂದು ವರದಿಗಳು ತಿಳಿಸಿವೆ.



















