ನವದೆಹಲಿ: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತದಲ್ಲಿ ಆಕ್ರೋಶ ಭುಗಿಲೆದ್ದಿದೆ. ಎಲ್ಲೆಡೆ ಪಾಕ್ ವಿರುದ್ಧ ಯುದ್ಧ ಘೋಷಿಸುವಂತೆ ಕೂಗು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಪ್ರವಾಸ ರದ್ದು ಮಾಡಿದ್ದಾರೆ.
ಮೇ 9 ರಂದು ನಡೆಯಲಿರುವ ರಷ್ಯಾದ (Russia) ವಿಜಯ ದಿವಸ್ ಆಚರಣೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಗವಹಿಸಬೇಕಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಗೈರಾಗಲಿದ್ದಾರೆ ಎಂದು ವರದಿಯಾಗಿದೆ.
ದೇಶದ ಭದ್ರತಾ ಕಾಳಜಿಯಿಂದ ಮೋದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಭಾರತದಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾಕ್ಕೆ ತೆರಳುವ ಸಾಧ್ಯತೆ ಇದೆ ಎನಲಾಗಿದೆ. ಈ ವಿಜಯ ದಿವಸ್ ಕಾರ್ಯಕ್ರಮಕ್ಕೆ ಚೀನಾ ಅಧ್ಯಕ್ಷ್ಯ ಕ್ಸಿ ಜಿನ್ಪಿಂಗ್ ಸೇರಿದಂತೆ ಇತರ ವಿಶ್ವ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ನಲಾಗಿದೆ. ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.