ಕನ್ನಡದ ಖ್ಯಾತ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ತಮ್ಮ ಆಸೆ ಈಡೇರಿಸಿಕೊಳ್ಳಲು ಹೊಸ ಪ್ಲ್ಯಾನ್ ಮಾಡಿದ್ದು, ಬೆಂಗಳೂರಿನ ಬಸವನಗುಡಿಯ ಕಡಲೆಕಾಯಿ ಪರಿಷೆ ಸುತ್ತಾಡಿದ್ದಾರೆ. ಈ ವೇಳೆ ಅವರು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಯಾರೊಬ್ಬರೂ ಅವರನ್ನು ಗುರುತಿಸಲು ಸಾಧ್ಯವಾಗಲೇ ಇಲ್ಲ.
ಹೌದು.. ನಟಿ ರಚಿತಾ ರಾಮ್ ಅವರು ‘ಕ್ರಿಮಿನಲ್’ ಹೆಸರಿನ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ಧ್ರುವ ಸರ್ಜಾ ನಾಯಕ. 8 ವರ್ಷಗಳ ಬಳಿಕ ಧ್ರುವ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ಗೆ ನಿರೀಕ್ಷೆ ಮೂಡಿದೆ. ಈ ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮ ಬಸವನಗುಡಿಯಲ್ಲೇ ನಡೆದಿದೆ. ಇದಾದ ಬಳಿಕ ರಚಿತಾ ಅವರು ಕಡಲೆಕಾಯಿ ಪರಿಷೆ ಸುತ್ತಾಡಿದ್ದಾರೆ.

ರಚಿತಾ ಅವರು ಕಡಲೆಕಾಯಿ ಪರಿಷೆ ಸುತ್ತಾಡಿದ ಫೋಟೋ ಹಾಗೂ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರಚಿತಾ ರಾಮ್ ಅವರು ಈ ವೇಳೆ ಮುಖಕ್ಕೆ ಸಿಂಹದ ಮಾಸ್ಕ್ ಧರಿಸಿದ್ದರು. ಹೀಗಾಗಿ ಯಾರಿಗೂ ಅವರ ಗುರುತು ಸಿಕ್ಕಿಲ್ಲ. ಅವರು ಹಾಯಾಗಿ ಅಂಗಡಿಗಳನ್ನು ಸುತ್ತಾಡಿ ಕಡಲೆಕಾಯಿ ಖರೀದಿ ಮಾಡಿದ್ದಾರೆ.
‘18 ವರ್ಷಗಳ ಬಳಿಕ ನಾನು ಪರಿಷೆಗೆ ಬಂದಿದ್ದೇನೆ. ಎಂತಹ ಅದ್ಭುತ ಅನುಭವ’ ಎಂದು ಅವರು ವಿಡಿಯೋಗೆ ಕ್ಯಾಪ್ಶನ್ ನಿಡಿದ್ದಾರೆ. ಈ ಪೋಸ್ಟ್ ನೋಡಿದ ಬಳಿಕ ಅನೇಕ ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರೆ. ‘ನಾವು ಪರಿಷೆಯಲ್ಲೇ ಇದ್ದೆವು. ಮೊದಲೇ ಪೋಸ್ಟ್ ಮಾಡಿದ್ದರೆ ನಿಮ್ಮನ್ನು ಗುರುತು ಹಿಡಿದು ಮಾತನಾಡಿಸುತ್ತಿದ್ದೆವು’ ಎಂದು ಹೇಳಿದ್ದಾರೆ. ಈ ಮೊದಲು ಅನೇಕ ಸೆಲೆಬ್ರಿಟಿಗಳು ಸಾರ್ವಜನಿಕ ಸ್ಥಳಗಳಿಗೆ ತೆರಳುವಾಗ ಮಾಸ್ಕ್ ಧರಿಸಿ ಹೋದ ಉದಾಹರಣೆ ಇದೆ. ಈಗ ರಚಿತಾ ಅವರು ಹೊಸ ಐಡಿಯಾ ಮಾಡಿದ್ದಾರೆ.
ಇದನ್ನೂ ಓದಿ : ಜೈಲಿನಲ್ಲಿ ಪಾರ್ಟಿ ವಿಡಿಯೋ ವೈರಲ್ ಪ್ರಕರಣ | ವಿಜಯಲಕ್ಷ್ಮೀ ಹೆಸರು ಬಾಯ್ಬಿಟ್ಟ ಧನ್ವೀರ್



















