ನಾಗರಹಾವು, ಸಂತ ಸೇರಿದಂತೆ ಸಾಕಷ್ಟು ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಎಸ್. ಮುರುಳಿ ಮೋಹನ್ ಅವರ ಆರೋಗ್ಯದಲ್ಲಿ ಸಮಸ್ಯೆಯಾಗಿದ್ದು, ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗಿದ್ದಾರೆ ಎನ್ನಲಾಗಿದೆ.
ತಮ್ಮ ಚಿಕಿತ್ಸೆಗೆ 25 ಲಕ್ಷ ರೂಪಾಯಿ ಹಣದ ಅಗತ್ಯವಿದ್ದು, ದಯವಿಟ್ಟು ಹಣಕಾಸಿನ ನೆರವು ನೀಡಬೇಕು ಎಂದು ಮನವಿ ಮಾಡಿದ್ದಾರೆ. ತಮ್ಮ ಆರೋಗ್ಯ ಸಮಸ್ಯೆಯ ಬಗ್ಗೆ ಅವರು ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಇನ್ನು ಈ ಪತ್ರದಲ್ಲಿ ನಾನು ಕಳೆದ 36 ವರ್ಷಗಳಿಂದಲೂ ಕನ್ನಡ ಚಿತ್ರರಂಗದಲ್ಲಿ ಸಿನಿಮಾ ನಿರ್ದೇಶಕನಾಗಿ, ಸಂಭಾಷಣೆಕಾರನಾಗಿ, ಗೀತ ರಚನೆಕಾರನಾಗಿ ಕೆಲಸ ಮಾಡುತ್ತಿದ್ದೇನೆ. ನನಗೆ 2018 ರಿಂದಲೂ ಆರೋಗ್ಯ ಸಮಸ್ಯೆ ಇದೆ.
ತ್ರಪಿಂಡ ವೈಫಲ್ಯ ಉಂಟಾದ ವಾರಕ್ಕೆ ಮೂರು ದಿನ ಡಯಾಲಿಸಿಸ್ ಮಾಡಿಸುತ್ತಿದ್ದೇನೆ. 2020ರಲ್ಲಿ ನಾನು ಮೂತ್ರಪಿಂಡಕ್ಕಾಗಿ ಅಂಗಾಗ ಕಸಿ ಕಾರ್ಯಕ್ರಮ ಜೀವನಸಾರ್ಥಕತೆಯಲ್ಲಿ ನೋಂದಣಿ ಮಾಡಿಸಿದ್ದೇನೆ. ಈಗ ನನಗೆ ಮೂತ್ರಪಿಂಡ ಕಸಿ ಮಾಡಿಸುವ ಸಮಯ ಬಂದಿದೆ. ಹೀಗಾಗಿ ಚಿಕಿತ್ಸೆಗೆ 25 ಲಕ್ಷ ರೂ. ಹಣದ ಅಗತ್ಯವಿದ್ದು, ದಯವಿಟ್ಟು ಹಣಕಾಸಿನ ನೆರವು ನೀಡಿ ಎಂದು ಮನವಿ ಮಾಡಿದ್ದಾರೆ.
ಎಸ್. ಮುರುಳಿ ಮೋಹನ್ ನಿರ್ದೇಶನದ ನಾಗರಹಾವು ಸಿನಿಮಾ 2022ರಲ್ಲಿ ತೆರೆ ಕಂಡಿತ್ತು. ಉಪೇಂದ್ರ ನಟನಾಗಿ ನಟಿಸಿರುವ ಈ ಸಿನಿಮಾದಲ್ಲಿ ಜ್ಯೋತಿಕಾ ಉಪೇಂದ್ರ ಅವರಿಗೆ ಜೋಡಿಯಾಗಿದ್ದರು.