ಬೆಂಗಳೂರು, ಆ.15: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಈ ನಿಟ್ಟಿನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಮಾಣಿಕ್ ಷಾ ಪರೇಡ್ ಗ್ರೌಂಡ್ನಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.
ಅದಕ್ಕೂ ಮುನ್ನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಧ್ವಜಾರೋಹಣ (ನೆರವೇರಿಸಿ, ಬಳಿಕ ರಾಷ್ಟ್ರಗೀತೆ, ವಂದೇ ಮಾತರಂ ಗೀತೆಗೆ ಗೌರವ ಸಲ್ಲಿಸಿದ್ದಾರೆ. ಇದೇ ವೇಳೆ ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದ್ದಾರೆ.
ನಾಡಿನ ಜನತೆಗೆ ಮತ್ತು ಭಾರತದ ನಾಗರಿಕರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರುತ್ತೇನೆ. ದೇಶದ ಶಾಂತಿಗೊಸ್ಕರ ದುಡಿದ ಎಲ್ಲರಿಗೂ ವಂದನೆ ಸಲ್ಲಿಸುತ್ತೇನೆ. ಜನರ ಒಬ್ಬ ಸೇವಕನಾಗಿ ಇಂದು ರಾಷ್ಟ್ರದ ಧ್ವಜವನ್ನ ಹಾರಿಸಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರನ್ನ ಒಟ್ಟಿಗೆ ತೆಗೆದುಕೊಂಡು ಹೋಗಿ ಶಾಂತಿ ನೆಮ್ಮದಿ , ಸಹಬಾಳ್ವೆಯನ್ನ ಕಾಪಾಡುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ಎಕ್ಸ್ನಲ್ಲಿ ವಿಶೇಷ ವಿಡಿಯೋ ಹಂಚಿಕೊಳ್ಳುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಶುಭಕೋರಿದ್ದರು.
ಇದನ್ನೂ ಓದಿ : 80ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾದ ಮಾಣಿಕ್ ಷಾ ಪರೇಡ್ ಮೈದಾನ ; ವಿಧಾನಸೌಧದಲ್ಲಿ ಫ್ರೀಡಂ ಹಬ್ಬದ ಸಂಭ್ರಮ!


















