ಬೆಂಗಳೂರು: ಐಶ್ವರ್ಯ ಗೌಡ (Aishwarya Gowda) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಗೆ ಇಡಿ ಸಮನ್ಸ್ ಬಂದಿದ್ದು, ಈ ವಿಷಯವಾಗಿ ಸ್ಪಷ್ಟನೆ ನೀಡಿದ್ದಾರೆ.
ಈ ವಿಷಯವಾಗಿ ಮಾತನಾಡಿದ ಅವರು, ಇಡಿ ಸಮನ್ಸ್ ಬಂದಿದ್ದು, ಗುರುವಾರ ವಿಚಾರಣೆಗೆ ಬರಲು ಹೇಳಿದ್ದಾರೆ. ಇಂದು ಮಧ್ಯಾಹ್ನ ಇಡಿಯವರು ಬಂದು ಸಮನ್ಸ್ ನೀಡಿದ್ದಾರೆ. ಸಮನ್ಸ್ನಲ್ಲಿ ಯಾವ ಪ್ರಕರಣ ಎಂಬುವುದನ್ನು ಹೇಳಿಲ್ಲ. ಆದರೆ, ದಾಖಲಾತಿ ನೋಡಿದಾಗ ಐಶ್ವರ್ಯಗೌಡ ಪ್ರಕರಣ ಎಂಬುವುದು ಗೊತ್ತಾಗಿದೆ. ಗುರುವಾರ ವಿಚಾರಣೆಗೆ ಬರುವಂತೆ ಹೇಳಿದ್ದಾರೆ. ಆದರೆ ಪೂರ್ವ ನಿಯೋಜಿತ ಕಾರ್ಯಕ್ರಮ ಇದೆ. ಅದಕ್ಕೆ ಸೋಮವಾರ ಬರುತ್ತೇನೆ ಎಂದು ಮೌಖಿಕವಾಗಿ ತಿಳಿಸಿದ್ದೇನೆ. ಈಗ ಮೇಲ್ ಮೂಲಕ ಅಧಿಕೃತವಾಗಿ ಹೇಳುತ್ತೇನೆ ಎಂದಿದ್ದಾರೆ.
ನಾನು ಯಾವುದೇ ಅಕೌಂಟ್ ಟ್ರಾನ್ಸಾಕ್ಷನ್ ಮಾಡಿಲ್ಲ. ನಮ್ಮ ಕ್ಷೇತ್ರದವರು ಎಂಬ ಕಾರಣಕ್ಕೆ ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೇನೆ. ಆದರೆ, ಸಹೋದರ ಎಂದು ಹೇಳಿಕೊಂಡು ಈ ರೀತಿ ಮಾಡಿದ್ದಾರೆ. ಇದು ಗೊತ್ತಾಗುತ್ತಿದ್ದಂತೆ ನಾನೇ ದೂರು ನೀಡಿದ್ದೇನೆ ಎಂದಿದ್ದಾರೆ.