ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಟ ಡಾಲಿ ಧನಂಜಯ್ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದಿದ್ದಾರೆ. ಈ ವೇಳೆ ಅಭಿಮಾನಿಗಳು ದರ್ಶನ್ ರನ್ನು ಕಂಡು ಮುಗಿ ಬಿದ್ದಿದ್ದಾರೆ.
ಆಷಾಢ ಮಾಸದಲ್ಲಿ ಶಕ್ತಿದೇವತೆ ಆರಾಧನೆ, ಶ್ರಾವಣ ಮಾಸದಲ್ಲಿ ವಿಷ್ಣು ದೇವರ ಆರಾಧನೆ ಹಾಗೂ ಕಾರ್ತಿಕ ಮಾಸದಲ್ಲಿ ಶಿವನ ಅರಾಧನೆ ಮಾಡುವುದು ವಿಶೇಷ. ಇಂದು ಆಷಾಢ ಮಾಸದ ಎರಡನೇ ಶುಕ್ರವಾರವಾದ ಕಾರಣ ಶಕ್ತಿದೇವಿಗೆ ವಿಜಯಲಕ್ಷ್ಮಿ ಅಲಂಕಾರ ಮಾಡಲಾಗಿದೆ. ಬೆಳಗ್ಗಿನ ಜಾವ 3 ಗಂಟೆಯಿಂದಲೇ ಚಾಮುಂಡೇಶ್ವರಿ ತಾಯಿಯ ಮೂಲ ವಿಗ್ರಹಕ್ಕೆ ಅಭಿಷೇಕ, ಅರ್ಚನೆ, ಅಲಂಕಾರ ಮಾಡಿ, ಮಂಗಳಾರತಿ ಮಾಡಿ, ನಂತರ 5.30 ರಿಂದ ಭಕ್ತರಿಗೆ ದರ್ಶನದ ವ್ಯವಸ್ಥೆ ಮಾಡಲಾಗಿತ್ತು.
ಡಾಲಿ ಧನಂಜಯ್ ಅವರು ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿ ದರ್ಶನ ಪಡೆದರು. ನಟ ಧನಂಜಯ್ ಅವರನ್ನು ನೋಡಲು ಹಾಗೂ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದರು.