ಜಾತಿ ಗಣತಿಯನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಆದರೆ, ರಾಜ್ಯ ಸರ್ಕಾರ ಅದನ್ನು ಕೈ ಬಿಡಬೇಕು. ಸುಮ್ಮನೆ ತಮ್ಮ ಸ್ವಾರ್ಥಕ್ಕಾಗಿ ರಾಜ್ಯ ಸರ್ಕಾರ ಜಾತಿ ಗಣತಿ ಮಾಡಲು ಹೊರಟಿದೆ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿಅ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿಯನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಬೆಳವಣಿಗೆಗಾಗಿ ಮಾಡಬೇಕು. ಆದರೆ, ಇವರು ರಾಜಕೀಯವಾಗಿ ಮಾಡುತ್ತಿದ್ದಾರೆ.
ಕಾಂತರಾಜ್ ವರದಿ ಕಾಂಗ್ರೆಸ್ ನವರಿಗೆ ಒಪ್ಪಿಗೆ ಇಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ. ssಕಾಂಗ್ರೆಸ್ ಒಂದೇ ಸಮುದಾಯವನ್ನು ಮೇಲಕ್ಕೆ ಎತ್ತುವ ಕಾರ್ಯ ಮಾಡುತ್ತಿದೆ. ಸಮೀಕ್ಷೆ ಮಾಡಿದರೆ ಅದರಲ್ಲೂ ಲೋಪ ದೋಷ ಇದ್ದೇ ಇರುತ್ತದೆ. ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಜೊತೆ ಚರ್ಚೆ ಮಾಡಲಿ. ಅವಾಗ ಕುಮಾರಸ್ವಾಮಿ ಅವರು ಈ ರಾಜ್ಯ ಸರ್ಕಾರಕ್ಕೆ ಬೆಂಬಲ ನೀಡುತ್ತಾರೆ ಎಂದಿದ್ದಾರೆ.