ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಈಗಾಗಲೇ ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಾಗಿದೆ.
ಇನ್ನೊಂದೆಡೆ ಇಡಿ ಕೂಡ ಅಲರ್ಟ್ ಆಗಿದೆ. ಈಗ ಇಡಿ ತನಿಖೆಗೆ ಇಳಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇಡಿ ಅಧಿಕಾರಿಗಳು ಸಿದ್ದರಾಮಯ್ಯ ಅವರಿಗೆ ಯಾವುದೇ ಕ್ಷಣದಲ್ಲಿ ನೋಟಿಸ್ ಕೊಟ್ಟು ವಿಚಾರಣೆ ನಡೆಸಬಹುದಾಗಿದೆ. ಶೀಘ್ರದಲ್ಲೇ ಇಡಿ ಅಧಿಕಾರಿಗಳು ಸಿಎಂ ಆಪ್ತರ ನಿವಾಸ ಅಥವಾ ಕಚೇರಿಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸಿಎಂ ಆಪ್ತರ ಚಲನವಲನ ಮೇಲೂ ನಿಗಾ ಇಟ್ಟಿದ್ದಾರೆ. ಸಿಎಂ ಆಪ್ತರ ಮನೆ, ಸಂಬಂಧಿಕರ ಮಾಹಿತಿ ಕಲೆ ಹಾಕಿದ್ದಾರೆ. ರಾಜ್ಯಾದ್ಯಂತ ಸಿಎಂ ಆಪ್ತರ ನಿವಾಸ ಅಥವಾ ಕಚೇರಿ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಜಾರ್ಖಂಡ್ ಮಾದರಿ ಇಡಿ ಅಧಿಕಾರಿಗಳು ದಾಳಿ ಮಾಡುವ ಸಾಧ್ಯತೆ ಇದೆ. ಇಡಿ ತಂಡ ಕೆಲ ಮಹತ್ವದ ಕಡತ ಬಗ್ಗೆಯೂ ಮಾಹಿತಿ ಕಲೆ ಹಾಕಿದೆ. ಮುಖ್ಯಮಂತ್ರಿ ಆಪ್ತರ ದೂರವಾಣಿ, ಬ್ಯಾಂಕ್ ಖಾತೆ ಸೇರಿದಂತೆ ಮಹತ್ವದ ಮಾಹಿತಿ ಕಲೆ ಹಾಕಲಾಗಿದೆ ಎಂದು ಕೂಡ ತಿಳಿದು ಬಂದಿದೆ.
ಕೆಸರೆ ಸರ್ವೆ ನಂ.464ರ 3.16 ಎಕರೆ ಜಮೀನಿಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ದೂರುದಾರ ಸ್ನೇಹಮಯಿ ಕೃಷ್ಣ ಜೊತೆ ಲೋಕಾಯುಕ್ತ ಟೀಂ ಭೇಟಿ ನೀಡಿದೆ. ಲೋಕಾಯುಕ್ತ ಎಸ್ಪಿ ಟಿ.ಜೆ ಉದೇಶ್ ನೇತೃತ್ವದ ತಂಡ ಪರಿಶೀಲನೆ ನಡೆಸುತ್ತಿದೆ. ಸಂಪೂರ್ಣ ಮಾಹಿತಿ ಕಲೆ ಹಾಕಿರುವ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.