ಚಿತ್ರದುರ್ಗ: ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಇಡಿ ಮತ್ತೆ ಅಘಾತ ನೀಡಿದೆ.
ಇಡಿ ಅಧಿಕಾರಿಗಳ ಚಳ್ಳಕೆರೆ ನಗರದ ಕೊಟೇಕ್ ಮಹೇಂದ್ರ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಪೆಡರಲ್ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಸೇರಿ ಹಲವೆಡೆ ಪರಿಶೀಲನೆ ನಡೆಸಿದ್ದಾರೆ.
ನಾಲ್ಕು ಇನ್ನೋವಾ ಕಾರುಗಳಲ್ಲಿ 10ಕ್ಕೂ ಹೆಚ್ಚು ಮಂದಿ ಇಡಿ ಅಧಿಕಾರಿಗಳು ಬ್ಯಾಂಕ್ ಗಳು ಓಪನ್ ಆಗುತ್ತಿದ್ದಂತೆ ಬೇಟಿ ನೀಡಿ, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸೇರಿದ 17 ಬ್ಯಾಂಕ್ ಖಾತೆಗಳ ಕುರಿತು ತೀವ್ರ ಪರಿಶೀಲನೆ ನಡೆಸಿದ್ದು, ಬ್ಯಾಂಕ್ ಲಾಕರ್ ಗಳನ್ನು ಇಂದು ಓಪನ್ ಮಾಡುವ ಸಾಧ್ಯತೆ ಇದೆ ಇದೆ ಎಂದು ತಿಳಿದು ಬಂದಿದೆ. 15 ದಿನಗಳಲ್ಲಿ 3ನೇ ಬಾರಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.



















