ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ಮುಖ್ಯರಸ್ತೆಯಲ್ಲಿ ರಾಜಗಾಂಭೀರ್ಯ ನಡಿಗೆಯಲ್ಲಿ ಕಾಡಾನೆಗಳು ಸಂಚರಿಸಿರುವ ಘಟನೆ ಸಕಲೇಶಪುರ ತಾಲೂಕು ಕಿರುಹುಣಸೆಯಲ್ಲಿ ನಡೆದಿದೆ. ವಡೂರು ಹಾಗೂ ಕಿರುಹುಣಸೆ ಗ್ರಾಮದಲ್ಲಿ 15 ದಿನಗಳಿಂದ ಮೂರು ಕಾಡಾನೆಗಳು ಬಿಡು ಬಿಟ್ಟಿವೆ.
ಎರಡು ದೈತ್ಯಾಕಾರದ ಆನೆಗಳು ಮುಖ್ಯ ರಸ್ತೆಯಲ್ಲೇ ಸಂಚರಿಸಿದ್ದು, ಗ್ರಾಮಸ್ಥರಲ್ಲಿ ಆತಂಕಕ್ಕೀಡಾಗಿದ್ದಾರೆ. ಆನೆಗಳು ಸಂಚರಿಸುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಕಾಡಾನೆಗಳೆ ಹಾವಳಿಯನ್ನು ತಡೆಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.