ದಾವಣಗೆರೆ: ಎಲ್ಲರೂ ರಾತ್ರಿ ಕನಸು ಕಂಡ್ರೆ ಕುಮಾರಸ್ವಾಮಿ ಹಗಲಲ್ಲಿ ಕನಸು ಕಾಣುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಹೆಚ್ಡಿಕೆಗೆ ಲೇವಡಿ ಮಾಡಿದ್ದಾರೆ.
ದಾವಣಗೆರೆಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಮುಂದಿನ 2028ಕ್ಕೆ ನಾನೇ ಸಿಎಂ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, 2013, 2019 ಹಾಗೂ 2023ರಲ್ಲಿ ನಾವೇ ಬರುತ್ತೇವೆ ಅಂದ್ರು ಬರಲಿಲ್ಲ. ಜೆಡಿಎಸ್ನಲ್ಲಿ ಸಿದರಾಮಯ್ಯ ಇದ್ದಾಗ 59 ಸೀಟ್ ಗೆದ್ದಿದ್ದರು. ಅದನ್ನು ಕೂಡ ಕುಮಾರಸ್ವಾಮಿ ರೀಚ್ ಆಗಲಿಲ್ಲ. 2023ರ ಚುನಾವಣೆಯಲ್ಲಿ 19ಕ್ಕೆ ಬಂದ್ರು, ಅವರು ಸಿಎಂ ಆಗುವ ಹಗಲುಗನಸು ಕಾಣುತ್ತಾರೆ ಎಂದು ತಿರುಗೇಟು ಕೊಟ್ಟಿದ್ದಾರೆ.
ದೇವೇಗೌಡ್ರು ನೂರು ವರ್ಷ ಅರೋಗ್ಯವಾಗಿ ಇರಲಿ. ನಾನು ಈಗ ಕಾಂಗ್ರೆಸ್ನಲ್ಲಿ ಇರಬಹುದು, ಆದರೆ ಅವರು ನನ್ನ ರಾಜಕೀಯ ಗುರುಗಳು. ಇನ್ನೂ, ಪ್ರಾದೇಶಿಕ ಪಕ್ಷಕ್ಕೆ ಅಷ್ಟೋ ಇಷ್ಟೋ ಶಕ್ತಿ ಇದೆ. ಬಿಜೆಪಿ ಸೇರಿ ಅದನ್ನು ಕೂಡ ಕಳ್ಕೊಂಡಿದ್ದಾರೆ. ಬಿಜೆಪಿ ಜೊತೆ ಸೇರಿದ್ರೆ ಏನು ಆಗುತ್ತೆ ಅಂತಾ ಮುಂದೆ ನೋಡೋಣ ಎಂದಿದ್ದಾರೆ.
ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವಿಚಾರವಾಗಿ, ಹಿಂದೆ ಶಾಮನೂರು ಶಿವಶಂಕರಪ್ಪ ಅವರು ನಂದು ಇದು ಕೊನೆಯ ಚುನಾವಣೆ. ನನ್ನ ನಂತ್ರ ಅಲ್ಪಸಂಖ್ಯಾತರೆಗೆ ಟಿಕೆಟ್ ಕೊಡುತ್ತೇವೆ ಅಂದಿದ್ರು. ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡಬೇಕು ಅಂತ ಬೇಡಿಕೆ ಇದೆ. ನಾನು ವರದಿಯನ್ನು ಹೈಕಮಾಂಡ್ಗೆ ಕೊಡುತ್ತೇನೆ. ಎಲ್ಲಾ ತಿರ್ಮಾನ ಮಾಡೋ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಪೌರಾಯುಕ್ತೆಗೆ ಧಮ್ಕಿ ಹಾಕಿ ಪರಾರಿಯಾಗಿದ್ದ ರಾಜೀವ್ ಗೌಡ ಕೊನೆಗೂ ಅರೆಸ್ಟ್!



















