ಬಳ್ಳಾರಿ: ಇಬ್ಬರು ಹೆಣ್ಣು ಮಕ್ಕಳನ್ನು ಅವರ ತಂದೆಯೇ ಕಾಲುವೆಗೆ ತಳ್ಳಿರುವ ಘಟನೆ ಬಳ್ಳಾರಿ ಗಡಿಯ ಸೀಮಾಂಧ್ರದ ಬೊಮ್ಮನ ಹಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅನಸೂಯ (12) ಹಾಗೂ ಸಿಂಧು (12) ಕಾಣೆಯಾದ ಹೆಣ್ಣು ಮಕ್ಕಳು ಇವರಲ್ಲಿ ಓರ್ವ ಬಾಲಕಿಯ ಶವ ಪತ್ತೆಯಾಗಿದ್ದು, ಇನ್ನೊಬ್ಬ ಬಾಲಕಿಯ ಹುಡುಕಾಟದಲ್ಲಿದ್ದಾರೆ. ಬೊಮ್ಮನ ಹಾಳ್ ಬಳಿಯ ನೇಮಕಲ್ ಗ್ರಾಮದ ನಿವಾಸಿಯಾದ ಕಲ್ಲಪ್ಪ, 5 ಮತ್ತು 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತನ್ನ ಇಬ್ಬರು ಹೆಣ್ಣು ಮಕ್ಕಳ ಕಾಲುವೆಗೆ ತಳ್ಳಿದ್ದಾನೆ.
ಸದ್ಯ ಸಿರಿಗೇರಿ ಕ್ರಾಸ್ ಬಳಿಯ ತುಂಗಭದ್ರಾ ಬಲದಂಡೆ ಕಾಲುವೆಯಲ್ಲಿ ಅನಸೂಯ ಶವ ಪತ್ತೆಯಾಗಿದ್ದು, ಮತ್ತೊಬ್ಬ ಬಾಲಕಿಯ ಪತ್ತೆಗಾಗಿ ಸೀಮಾಂದ್ರದ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಮಗಳನ್ನ ಮದುವೆ ಮಾಡಿಕೊಡಲಿಲ್ಲ ಎಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ



















