ಬೆಂಗಳೂರು : ಆನೇಕಲ್ ಪಟ್ಟಣದಲ್ಲಿ ಪುಂಡರ ಹಾವಳಿ ಮಿತಿಮೀರಿದ್ದು, ನಡುರಸ್ತೆಯಲ್ಲೇ ಯುವಕನ ಮೇಲೆ ಗ್ಯಾಂಗ್ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಆನೇಕಲ್ ಪಟ್ಟಣದ ಹೊಂಪಲಘಟ್ಟ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಹಣಕಾಸಿನ ವಿಚಾರಕ್ಕೆ ಯುವಕನನ್ನು ಅಡ್ಡಗಟ್ಟಿ ಗಲಾಟೆ ನಡೆಸಿರುವ ಆರೋಪ ಕೇಳಿಬಂದಿದೆ. ಬಳಿಕ ಗ್ಯಾಂಗ್ ಯುವಕನ ಮೇಲೆ ಹಲ್ಲೆ ನಡೆಸಿ, ಕಾಲಿನಿಂದ ಒದ್ದು ಹಿಗ್ಗಾಮುಗ್ಗ ಥಳಿಸಿರುವ ದೃಶ್ಯಗಳು ಸ್ಥಳೀಯರಲ್ಲಿ ಆತಂಕ ಮೂಡಿಸಿವೆ.
ಇತ್ತೀಚಿನ ದಿನಗಳಲ್ಲಿ ಆನೇಕಲ್ನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಪೊಲೀಸರ ಭಯವೇ ಇಲ್ಲದಂತೆ ಪುಂಡರು ಗೂಂಡಾಗಿರಿ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುಂಡರ ನಿರಂತರ ಹಾವಳಿಯಿಂದ ಸಾರ್ವಜನಿಕರು ಹೈರಾಣಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಆನೇಕಲ್ ಪೊಲೀಸರ ವಿರುದ್ಧ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ : ಬೆಳಗಾವಿಯಲ್ಲಿ ಪ್ಲಾಸ್ಟಿಕ್ ಕಂಪನಿಗೆ ಬೆಂಕಿ ; ಲಕ್ಷಾಂತರ ವಸ್ತುಗಳು ಸುಟ್ಟ ಭಸ್ಮ



















