ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆ ಬಿಜೆಪಿ ಮುಖಂಡ ತಮ್ಮ ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯ ನಾಗನೂರು ಸಮೀಪದ ತೋಟದಲ್ಲಿ ನಡೆದಿದೆ.
ಇತ್ತೀಚೆಗೆ ಅವರ ಮಕ್ಕಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ಮನನೊಂದ ಮುಖಂಡ ತಮ್ಮ ಸಜೀವದಹನಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇತ್ತೀಚೆಗೆ ಚಂದ್ರಶೇಖರ್ ಸಂಕೋಲ್ ಅವರ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರದಿಂದ ಮನನೊಂದಿದ್ದ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ | ಟೆಂಪೋ-ಟ್ರ್ಯಾಕ್ಟರ್ ಮಧ್ಯೆ ಡೆಡ್ಲಿ ಆಕ್ಸಿಡೆಂಟ್ ; ಓರ್ವ ಸಾವು!



















