ವಿಜಯಪುರ: ಕೌಟುಂಬಿಕ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಚಡಚಣ ತಾಲೂಕಿನ ಶಿರಾಡೋಣ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಮೀನಿನಲ್ಲಿನ ಸೀಮೆಗಾಗಿ ಕೌಟುಂಬಿಕ ಜಗಳ ನಡೆದಿದ್ದು, ಅದು ಕೊಲೆಯಲ್ಲಿ ಅಂತ್ಯವಾಗಿದೆ. ಚಿಕ್ಕಪ್ಪನೇ ಅಣ್ಣನ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಕೊಡಲಿಯಿಂದ ಅರ್ಧ ಕುತ್ತಿಗೆ ಕಡಿದು ಹತ್ಯೆ ಮಾಡಿದ್ದಾನೆ. ಬೀರಪ್ಪ ಸೀರೆಪ್ಪ ಸಲಗರ ಉರ್ಫ್ ಸೊಲಂಕರ ಹತ್ಯೆಯಾಗಿರುವ ದುರ್ದೈವಿ ಎನ್ನಲಾಗಿದೆ. ಚಿಕ್ಕಪ್ಪ ಅಮಸಿದ್ದ ಸಿದ್ದರಾವ ಸಲಗರ ಉರ್ಫ್ ಸೊಲಂಕರ ಕೊಲೆ ಮಾಡಿದ ವ್ಯಕ್ತಿ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.