ತುಮಕೂರು: ಆರ್ಸಿಬಿ ಗೆಲುವಿನ ಸಂಭ್ರಮದ ವೇಳೆ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ ಮನೋಜ್ ಅಂತ್ಯಕ್ರಿಯೆಯನ್ನು ನಡೆಸಲಾಯಿತು.
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಎಡೆಯೂರು ಬಳಿಯ ನಾಗಸಂದ್ರ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ತಂದೆ ತಾಯಿ ಹಾಗೂ ತಂಗಿ ಜೊತೆ ಯಲಹಂಕದಲ್ಲಿ ವಾಸವಿದ್ದ ಮನೋಜ್ , ಹೆಬ್ಬಾಳ ಬಳಿಯ ಕೆಂಪಾಪುರದ ರೆಸಿಡೆನ್ಸಿ ಕಾಲೇಜಿನಲ್ಲಿ ಬಿಬಿಎಂ ಮಾಡುತ್ತಿದ್ದರು. ನಿನ್ನೆ ಸ್ನೇಹಿತರ ಜೊತೆ ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿದ್ದ ವೇಳೆ ಮನೋಜ್ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ. ಮನೋಜ್ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಸಿದ್ದು, ಮೃತದೇಹದ ಮುಂದೆ ಕುಟುಂಬಸ್ಥರು ಕಣ್ಟಿರಿಟ್ಟಿದ್ದಾರೆ.