ಬಾಗಲಕೋಟೆ : ಪ್ರತಿ ಟನ್ ಕಬ್ಬಿಗೆ 3,500 ರೂ. ಘೋಷಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪಕ್ಕೆ ತಿರುಗಿದೆ. ಇದೀಗ ಜಿಲ್ಲೆಯ ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ಸಾಲಾಗಿ ನಿಲ್ಲಿಸಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆಯ ಮುಧೋಳದ ಮಾಹಾಲಿಂಗಪುರ ಪಟ್ಟಣ ಬಳಿಯ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ಸಾಲಾಗಿ ನಿಲ್ಲಿಸಿದ್ದ 100ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ರೈತರು ಸಿಡಿದೆದ್ದಿದ್ದಾರೆ.

ಆರಂಭದಲ್ಲಿ ನಿಪ್ಪಾಣಿ-ಮಹಾಲಿಂಗಪುರ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಮಾಡಲಾಗಿತ್ತು. ಪ್ರತಿ ಟನ್ ಕಬ್ಬಿಗೆ 3,500 ರೂ. ಕೊಡಬೇಕೆಂದು ಆಗ್ರಹಿಸಿದ್ದ ರೈತರು, ಸೈದಾಪುರ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಆ ಬಳಿಕ ತಾಳ್ಮೆ ಕಳೆದುಕೊಂಡ ರೈತರು ಮಹಲಿಂಗಪುರ-ನಿಪ್ಪಾಣಿ ರಸ್ತೆಯಲ್ಲಿರುವ ಸೈದಾಪುರ ಸಕ್ಕರೆ ಕಾರ್ಖಾನೆ ಅವರಣದಲ್ಲಿನ ಕಬ್ಬು ತುಂಬಿದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿದ್ದಾರೆ. 100ಕ್ಕೂ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿ ಕಣ್ಣೀರಿಟ್ಟಿದ್ದಾರೆ. ಇದರಿಂದ ಸಾವಿರಾರು ಟನ್ ಕಬ್ಬು ಸುಟ್ಟು ಭಸ್ಮವಾಗಿದೆ.
ಇನ್ನೂ ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರ ಪ್ರತಿಭಟನೆಯ ವೇಳೆ ಕಲ್ಲು ತೂರಿದ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ನವೆಂಬರ್ 7ರಂದು ಘಟನೆ ನಡೆದಿತ್ತು. ರೈತರ ಹೋರಾಟದಲ್ಲಿ ಕಿಡಿಗೇಡಿಗಳು ಸೇರಿದ್ದಾರೆ ಎಂದು ಮಾಹಿತಿ ಸಿಕ್ಕಿತ್ತು. ಕೆಲವರನ್ನು ವಶಕ್ಕೆ ಪಡೆಯುತ್ತಿದ್ದ ವೇಳೆ ಕಲ್ಲು ತೂರಾಟ ಆಗಿತ್ತು. ಈ ವೇಳೆ ಡಿವೈಎಸ್ಪಿ ಮಹಾಂತೇಶ್ ಸಜ್ಜನ್ ಸೇರಿ 12 ಪೊಲೀಸ್ ಸಿಬ್ಬಂದಿಗೆ ಗಾಯಗೊಂಡಿದ್ದರು.
ಆರೋಪಿಗಳ ವಿರುದ್ಧ ದೊಂಬಿ, ಗುಂಪು ಗಲಭೆ, ಮಾರಣಾಂತಿಕ ಹಲ್ಲೆ ಪ್ರಕರಣದಡಿ ಕೇಸ್ ದಾಖಲಾಗಿದೆ. ಇತ್ತ, ನ.6ರಂದು ಬಿಡದಿ ಟೌನ್ಶಿಪ್ ವಿರುದ್ಧ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ 9 ರೈತರ ಮೇಲೆ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ : ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ.. ಎಷ್ಟು ದಿನ ಕಲಾಪ?



















