ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಾಗೇಶ್ (42) ಎಂಬಾತ ಮಗಳು ಧನುಶ್ರೀ (12)ಗೆ ಈಜು ಕಲಿಸಲು ಹೋಗಿದ್ದರು. ಕೆರೆಯಲ್ಲಿ ಹೂಳು ತುಂಬಿದ್ದರಿಂದ ತಂದೆ ಹಾಗೂ ಮಗಳು ಇಬ್ಬರೂ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಈಗಾಗಲೇ ಅಧಿಕಾರಿಗಳು ಆಗಮಿಸಿ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಶಿಡ್ಲಘಟ್ಟ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಶಿಡ್ಲಘಟ್ಟ ಶಾಸಕ ಬಿ ಎನ್ ರವಿಕುಮಾರ್ ಭೇಟಿ ನೀಡಿ ಕುಟುಂಸ್ತರಿಗೆ ಸಾಂತ್ವಾನವನ್ನು ಹೇಳಿದ್ದಾರೆ.
ಮಗಳು ಧನುಶ್ರೀ ಭರತನಾಟ್ಯದಲ್ಲಿ ಖ್ಯಾತಿ ಹಾಗು ಪ್ರಾವಿಣ್ಯ ಹೊಂದಿದ್ದು, ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.