ರಾಯಚೂರು: ಫುಡ್ ಪಾಯಿಸನ್ ಗೆ (Food poisoning) ತಂದೆ ಸೇರಿದಂತೆ ಇಬ್ಬರು ಮಕ್ಕಳು ಬಲಿಯಾಗಿರುವ ಘಟನೆ ನಡೆದಿದೆ. ರಾಯಚೂರಿನ (Raichur) ಸಿರವಾರ ತಾಲೂಕಿನ ಕೆ.ತಿಮ್ಮಾಪುರ (K Thimmapura) ಗ್ರಾಮದಲ್ಲಿ ಈ ಘಟನೆ ನಡೆದಿದೆ.
ರಮೇಶ್(38), ಮಗಳು ನಾಗಮ್ಮ(8), ದೀಪಾ(6) ಸಾವನ್ನಪ್ಪಿರುವ ದುರ್ದೈವಿಗಳು ಎಂದು ತಿಳಿದು ಬಂದಿದೆ. ಅಲ್ಲದೇ, ಘಟನೆಯಲ್ಲಿ ತಾಯಿ ಪದ್ಮಾ, ಮಕ್ಕಳಾದ ಕೃಷ್ಣ, ಚೈತ್ರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿಗೆ ಗುಳೆ ಹೋಗಿದ್ದ ರಮೇಶ್ ಕುಟುಂಬವು 4 ದಿನಗಳ ಹಿಂದೆ ಗ್ರಾಮಕ್ಕೆ ಮರಳಿ ಆಗಮಿಸಿತ್ತು. ಆದರೆ, ರಮೇಶ್ ಗ್ರಾಮದಲ್ಲಿನ ತಮ್ಮ ತೊಗರಿ ಬೆಳೆಗೆ ಕ್ರಿಮಿನಾಶಕ ಸಂಪಡಣೆ ಮಾಡಿದ್ದರು.
ಆನಂತರ ರಾತ್ರಿ ರೊಟ್ಟಿ ಚವಳೆಕಾಯಿ ಪಲ್ಯ, ಅನ್ನ, ಸಾಂಬರ್ ಊಟ ಮಾಡಿದ್ದರು. ರಾತ್ರಿ 3 ಗಂಟೆ ಸುಮಾರಿಗೆ ಕುಟುಂಬಸ್ಥರಿಗೆ ಹೊಟ್ಟೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದ್ದಾರೆ. ಕವಿತಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


















