ಕನ್ನಡದ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ (Kamal Haasan) ಹೇಳಿಕೆ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಕನ್ನಡ ಮನಸ್ಸುಗಳ ಕ್ಷಮೆ ಕೇಳಬೇಕೆಂಬ ಆಗ್ರಹ ಕೇಳಿ ಬರುತ್ತಿದೆ. ಈ ವಿಷಯವಾಗಿ ಫಿಲ್ಮ್ ಚೇಂಬರ್ ಹಿಂದೆ ಕೂಡ ಸೂಚಿಸಿತ್ತು. ಆದರೆ, ಕಮಲ್ ಹಾಸನ್ ಮಾತ್ರ ಕ್ಷಮೆ ಕೇಳಿರಲಿಲ್ಲ. ಆದರೆ, ಈಗ ಮತ್ತೆ ಕ್ಷಮೆ ಕೇಳಲು ಗಡುವು ನೀಡಲಾಗಿದೆ.
ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಅವರ ನಟನೆಯ ‘ಥಗ್ ಲೈಫ್’ ಚಿತ್ರದ ರಿಲೀಸ್ಗೆ ಕರ್ನಾಟಕದಲ್ಲಿ ಅವಕಾಶ ನೀಡಬಾರದು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಈ ವಿಚಾರವಾಗಿ ಇಂದು ಕೂಡ ಫಿಲ್ಮ್ ಚೇಂಬರ್ ನಲ್ಲಿ ಸಭೆ ನಡೆಯಿತು. ‘ಥಗ್ ಲೈಫ್’ ಚಿತ್ರದ ಕರ್ನಾಟಕದ ವಿತರಕ ವೆಂಕಟೇಶ್ ಅವರ ಕೋರಿಕೆ ಮೇರೆಗೆ ಕಮಲ್ಗೆ ಮತ್ತೆ 24 ಗಂಟೆ ಟೈಮ್ ನೀಡಲಾಗಿದೆ.
ಈ ಕುರಿತು ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಮಾಹಿತಿ ನೀಡಿದ್ದು, ‘ಕಮಲ್ ಹಾಸನ್ ಕ್ಷಮೆ ಕೇಳುತ್ತಾರೆ ಅನಿಸುತ್ತಿಲ್ಲ.
ಎಲ್ಲರ ಜೊತೆ ಚರ್ಚೆ ಮಾಡುತ್ತೇವೆ. ಎಲ್ಲರ ಅನಿಸಿಕೆ ಏನಿದೆ ಎಂಬುವುದನ್ನು ನೋಡುತ್ತೇವೆ. ಕಮಲ್ ಹಾಸನ್ ಸದ್ಯ ದುಬೈನಲ್ಲಿದ್ದಾರೆ. ಹೀಗಾಗಿ ನಾಳೆಯವರೆಗೆ ಟೈಮ್ ಕೊಡಿ ಎಂದು ವಿತರಕರು ಕೇಳಿದ್ದಾರೆ. ಹೀಗಾಗಿ ಗಡುವು ನೀಡಲಾಗಿದೆ ಎಂದಿದ್ದಾರೆ.