ಬೆಂಗಳೂರು : ಪುಟ್ಪಾತ್ ತೆರವು ಕಾರ್ಯಾಚರಣೆ ನಡೆಸಿದ ಪ್ರದೇಶಗಳಲ್ಲೇ ಮತ್ತೆ ವ್ಯಾಪಾರಕ್ಕೆ ಮುಂದಾದವರ ವಿರುದ್ಧ ಗ್ರೇಟರ್ ಬೆಂಗಳೂರು ಆಡಳಿತ (ಜಿಬಿಎ) ಕಠಿಣ ಕ್ರಮ ಕೈಗೊಂಡಿದೆ. ಕೇಂದ್ರ ನಗರಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ನಡೆದ ಕಾರ್ಯಾಚರಣೆಯಲ್ಲಿ 536 ವ್ಯಾಪಾರಿಗಳಿಗೆ ಒಟ್ಟು 8,97,500 ದಂಡ ವಿಧಿಸಿ ವಸೂಲಿ ಮಾಡಲಾಗಿದೆ.
ಪುಟ್ಪಾತ್ಗಳನ್ನು ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ತೆರವುಗೊಳಿಸಿದ ಬಳಿಕವೂ ಕೆಲ ವ್ಯಾಪಾರಿಗಳು ಅದೇ ಸ್ಥಳಗಳಲ್ಲಿ ಮತ್ತೆ ಅಂಗಡಿ-ಮುಂಗಟ್ಟುಗಳನ್ನು ಹಾಕಿ ವ್ಯಾಪಾರ ನಡೆಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಬಿಎ ಸಿಬ್ಬಂದಿ ನಿರಂತರವಾಗಿ ಪರಿಶೀಲನೆ ನಡೆಸಿ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಪ್ರಯೋಗಿಸುತ್ತಿದ್ದಾರೆ.
ಮೊದಲ ಬಾರಿಗೆ ನಿಯಮ ಉಲ್ಲಂಘಿಸುವವರಿಗೆ ಸಾಮಾನ್ಯ ದಂಡ ವಿಧಿಸಲಾಗುತ್ತಿದ್ದು, ಒಮ್ಮೆ ತೆರವುಗೊಳಿಸಿದ ಸ್ಥಳದಲ್ಲೇ ಎರಡನೇ ಬಾರಿಗೆ ಮತ್ತೆ ವ್ಯಾಪಾರ ನಡೆಸಿದರೆ ದುಪ್ಪಟ್ಟು ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗಿದೆ.
ಪುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪರಿಣಾಮಕಾರಿಯಾಗಿ ಮುಂದುವರಿಸುವ ಜೊತೆಗೆ, ತೆರವುಗೊಂಡ ಜಾಗದಲ್ಲಿ ಮತ್ತೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಕೇಂದ್ರ ನಗರಪಾಲಿಕೆ ಕಟ್ಟುನಿಟ್ಟಿನ ನಿಗಾ ವಹಿಸಿದೆ. ಸಾರ್ವಜನಿಕರಿಗೆ ನಡೆದಾಡಲು ಮೀಸಲಾದ ಪುಟ್ಪಾತ್ಗಳನ್ನು ಮತ್ತೆ ವ್ಯಾಪಾರದ ತಾಣಗಳನ್ನಾಗಿ ಮಾಡದಂತೆ ಈ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ : 200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!



















