ಹಾಸನ: ಸೂರಜ್ ರೇವಣ್ಣ (Suraj Revanna) ಅವರಿಗೆ ಬ್ಲಾಕ್ ಮೇಲ್ ಮಾಡಲಾಗಿದೆ ಎದು ದೂರು ಸಲ್ಲಿಸಿದ್ದ ಶಿವಕುಮಾರ್ (Shivakumar) ವಿರುದ್ಧ ಹಣ ದುರುಪಯೋಗ ಆರೋಪದಲ್ಲಿ ಎಫ್ಐಆರ್ (FIR) ದಾಖಲಾಗಿದೆ.
ಶ್ರೀರಾಮ್ ಫೈನಾನ್ಸ್ನ ರಾಮನಾಥಪುರ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಮೇಲೆ ವಾಹನ ಸಾಲ ಪಡೆದ ಗ್ರಾಹಕರು ದೂರು ಸಲ್ಲಿಸಿದ್ದಾರೆ. ಗ್ರಾಹಕರು ನೀಡಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.
ಆರು ಗ್ರಾಹಕರು ವಾಹನ ಸಾಲದ ವಂತಿಗೆ ಕಟ್ಟಲು ನೀಡಿದ್ದ 2,91,916 ರೂ. ಹಣವನ್ನು ಶಿವಕುಮಾರ್ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ರಾಮನಾಥಪುರ ಶಾಖೆಯ ಮ್ಯಾನೇಜರ್ ಕೇಶವಮೂರ್ತಿ ಜೂ.21 ರಂದು ಕೊಣನೂರು ಠಾಣೆಗೆ ದೂರು ದಾಖಲಿಸಿದ್ದಾರೆ.
ಅರಕಲಗೂಡು ಮೂಲದ ಯುವಕನೊಬ್ಬ ವಿಪ ಸದಸ್ಯ ಸೂರಜ್ ರೇವಣ್ಣಗೆ ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಆರೋಪಿಸಿ ಶಿವಕುಮಾರ್ ದೂರು ನೀಡಿದ್ದರು.