ತುಮಕೂರು: ಸ್ವಾಮೀಜಿಗಳ ಮೇಲೆ ಎಫ್ ಐಆರ್ ಹಾಕಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ತುಮಕೂರಿನ (Tumakuru) ಮೂಲಕ ರಾಮನಗರಕ್ಕೆ ಹೇಮಾವತಿ ನೀರು ಹರಿಸುವ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗೆ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮೇ 31ರಂದು ಹೆದ್ದಾರಿ ರಸ್ತೆ ತಡೆದು ಪ್ರತಿಭಟನಾಕಾರರು (Protesters) ಆಕ್ರೋಶ ವ್ಯಕ್ತಪಡಿಸಿದ್ದರು. ಹಲವು ಗೊಂದಲಮಯ ವಾತಾವರಣ ಕೂಡ ನಿರ್ಮಾಣವಾಗಿತ್ತು.
ಈ ಹಿನ್ನೆಲೆಯಲ್ಲಿ ರೈತ ಹೋರಾಟಗಾರರ ಮೇಲೆ ಎಫ್ಐಆರ್ (FIR) ದಾಖಲಾಗಿತ್ತು. ಸ್ವಾಮೀಜಿಗಳ ಮೇಲೂ ಎಫ್ಐಆರ್ ದಾಖಲಾಗಿದೆ. ಸ್ವಾಮೀಜಿಗಳ ಮೇಲೂ ಎಫ್ಐಆರ್ ಹಾಕಿದ್ದಕ್ಕೆ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.