ಮೈಸೂರು : ವ್ಯಕ್ತಿಯೋರ್ವ ಹಿರಿಯ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ನನ್ನ ಸಾವಿಗೆ ಎಸಿಎಫ್ ಮೇಡಮ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಜಿಲ್ಲೆಯ ಸರಗೂರು ತಾಲೂಕಿನಲ್ಲಿ ನಡೆದಿದೆ. ಪಿ.ಸುರೇಶ್ (34) ಆತ್ಮಹತ್ಯೆ ಮಾಡಿಕೊಂಡಿರುವ ಅರಣ್ಯ ಸಿಬ್ಬಂದಿಯಾಗಿದ್ದು. ಗುಂಡ್ಲುಪೇಟೆ ತಾಲೂಕು ಬೆರಂಬಾಡಿ ಗ್ರಾಮದ ನಿವಾಸಿಯಾಗಿದ್ದಾರೆ.
ಸುರೇಶ್ ಗೆ ಅರಣ್ಯ ಇಲಾಖೆಯಿಂದ ವಸತಿ ನಿಲಯವನ್ನು ನೀಡಲಾಗಿತ್ತು. ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಡೆತ್ ನೋಟ್ ನಲ್ಲಿ ಎಸಿಎಫ್ ಅಮೃತ ಮಾಯಪ್ಪನವರೇ ಕಾರಣ ಎಂದು ಉಲ್ಲೇಖ ಮಾಡಲಾಗಿದ್ದು, ಸುರೇಶ್ ಸಾವಿಗೆ ನ್ಯಾಯ ಕೊಡಿಸಿ ಎಂದು ಕುಟುಂಬಸ್ಥರು, ಸ್ಥಳೀಯರು ಆಗ್ರಹ ಆಗ್ರಹಿಸಿದ್ದಾರೆ. ಈಗಾಗಲೇ ಸರಗೂರು ಠಾಣೆಯಲ್ಲಿ ಹೊಟ್ಟೆನೋವು ತಾಳಲಾರದೆ ಸಾವು ಎಂದು ಪ್ರಕರಣ ದಾಖಲಾಗಿದ್ದು, ಡೆತ್ ನೋಟ್ ಇದ್ದರೂ ಹೊಟ್ಟೆನೋವು ಎಂದು ಕೇಸ್ ದಾಖಲಾಗಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.