ಹುಬ್ಬಳ್ಳಿ : ಉಗ್ರರ ದಾಳಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವುದು, ಬಿಡುವುದು ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ. ಇದರಲ್ಲಿ ಕಾಂಗ್ರೆಸ್ ನಾಯಕರು ಮೂಗು ತೋರಿಸುವುದು ಬೇಡ. ಈ ವಿಚಾರವಾಗಿ ಸಿದ್ದರಾಮಯ್ಯನವರ ಹೇಳಿಕೆ ಸರಿಯಲ್ಲ. ಅವರ ಈ ಹೇಳಿಕೆಯಿಂದಲೇ ಅವರು ಪಾಕಿಸ್ತಾನದಲ್ಲಿ ಪ್ರಸಿದ್ಧಿ ಪಡೆದುಕೊಳ್ಳುತ್ತಿದ್ದಾರೆ. ಸಿದ್ಧರಾಮಯ್ಯ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸುವುದು ಒಳ್ಳೆಯದು ಎಂದಿದ್ದಾರೆ.
ಪಾಕಿಸ್ತಾನದ ಬಗ್ಗೆ ನಿಲುವು ತೋರುತ್ತಿರುವುದು ಸರಿಯಲ್ಲ. ಮುಸ್ಲಿಂರ ಪರವಾಗಿ ನಿಲುವು ವ್ಯಕ್ತಪಡಿಸುವುದು ಸರಿಯಲ್ಲ. ಈ ಹೇಳಿಕೆಯಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಈಗಾಗಲೇ ಅವರಿಗೆ ಹೈಕಮಾಂಡ್ ನಾಯಕರು ವಾರ್ನಿಂಗ್ ನೀಡಿದ್ದಾರೆ. ಇದನ್ನು ಸಿಎಂ ಹಾಗೂ ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.