ರಾಮನಗರ: ಮಾಜಿ ಸಚಿವ ಹಾಗೂ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೀಶ್ವರ್ ತಂದೆ ಇಹಲೋಕ ತ್ಯಜಿಸಿದ್ದಾರೆ.
ತಂದೆ ಪುಟ್ಟಮಾದೇಗೌಡ(89) ಭಾನುವಾರ ವಯೋಸಹಜ ಕಾಯಿಲೆಯಿಂದಾಗಿ ನಿಧನರಾಗಿದ್ದಾರೆ. ಪುಟ್ಟಮಾದೇಗೌಡ ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಾವನ್ನಪ್ಪಿದ್ದಾರೆ.
ಸೋಮವಾರ ಸ್ವಗ್ರಾಮ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಯೋಗೀಶ್ವರ್ ಅವರ ತಂದೆ ಪುಟ್ಟಮಾದೇಗೌಡ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಯೋಗೀಶ್ವರ್ ತಂದೆಯ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.