ಚೆನ್ನೈ ಮತ್ತು ಆರ್ ಸಿಬಿ ಪಂದ್ಯದ ವೇಳೆ ಕಾಳ ಸಂತೆಯಲ್ಲಿ ಟಿಕೆಟ್ ಮಾರಾಟ ಮಾಡಿದ ನಾಲ್ವರನ್ನು ಆರೋಪಿಗಳು ವಶಕ್ಕೆ ಪಡೆದಿದ್ದಾರೆ.
ಕಾಳ ಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು 32 ಐಪಿಎಲ್ ಟಿಕೆಟ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಚರಣ್ ರಾಜ್, ಹರ್ಷವರ್ಧನ್, ವಿನಯ್, ವೆಂಕಟಸಾಯಿ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ. ಯಶವಂತಪುರ ಬಳಿಯ ಪೈಪ್ ಲೈನ್ ರಸ್ತೆಯಲ್ಲಿ ಆರೋಪಿಗಳು ಟಿಕೆಟ್ ಮಾರಾಟಕ್ಕೆ ಯತ್ನಿಸುತ್ತಿದ್ದರು.
ಈ ವೇಳೆ ದಾಳಿ ಮಾಡಿರುವ ಪೊಲೀಸರು 38 ಸಾವಿರ ಬೆಲೆ ಬಾಳುವ 32 ಟಿಕೆಟ್ ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಒಂದು ಲಕ್ಷ ರೂ. ಹಣದ ಜೊತೆಗೆ ನಾಲ್ಕು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ.