ಬೆಂಗಳೂರು: ಉದ್ಯಮಿಗಳನ್ನು ಹೆದರಿಸುತ್ತಿದ್ದ ನಾಲ್ವರು ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸಲಾಗಿದೆ.
ಕೇಸ್ ಮುಚ್ಚಿ ಹಾಕುವುದಕ್ಕಾಗಿ 1.5 ಕೋಟಿ ರೂ. ಹಣ ಪಡೆದಿದ್ದ ಕೇಂದ್ರದ ನಾಲ್ವರು ಜಿಎಸ್ ಟಿ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದೇ ಮೊಟ್ಟ ಮೊದಲ ಬಾರಿಗೆ ಜಿಎಸ್ ಟಿ ಅಧಿಕಾರಿಗಳು ಬಂಧಿಯಾಗಿದ್ದಾರೆ.
ಜಿಎಸ್ ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ನಾಗೇಶ್ ಬಾಬು ಬಂಧಿತ ಆರೋಪಿಗಳು. ಬಂಧಿತರಲ್ಲಿ ಓರ್ವ ಮಹಿಳೆ ಅಧಿಕಾರಿ ಕೂಡ ಇದ್ದಾರೆ.
ಉದ್ಯಮಿಯೊಬ್ಬರಿಗೆ ಹೆದರಿಸಿ ಹಣ ಪಡೆದಿದ್ದರು ಎನ್ನಲಾಗಿದೆ. ಕೇಸ್ ಮುಚ್ಚಿಹಾಕುವುದಾಗಿ ಜಿಎಸ್ ಟಿ ಅಧಿಕಾರಿಗಳು ಹಣ ಪಡೆದು ಬಳಿಕ ಪರಾರಿಯಾಗಿದ್ದರು. ಈ ಕುರಿತು ಉದ್ಯಮಿಯೊಬ್ಬರು ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಪೊಲೀಸರು ಅಧಿಕಾರಿಗಳನ್ನು ಬಂಧಿಸಿದ್ದಾರೆ.ಈ ಪ್ರಕರಣವನ್ನು ನಗರ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದರು.