ರಾಯಚೂರು: ಹಳ್ಳ ದಾಟುತ್ತಿದ್ದ ವೇಳೆ ಕೊಚ್ಚಿಹೋಗಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ದೋತರಬಂಡಿ ಗ್ರಾಮದಲ್ಲಿ ಒಂದು ವಾರದಿಂದಲೂ ಮಳೆ ಸುರಿಯುತ್ತಿದೆ.
ಭಾರೀ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಸೇತುವೆಗಳ ಮೇಲೆಯೂ ನೀರು ಹರಿಯುತ್ತಿದೆ. ಈ ವೇಳೆ ಬ್ರಿಡ್ಜ್ ಮೇಲೆ ಎರಡು ಬೈಕುಗಳಲ್ಲಿ ನಾಲ್ವರು ಸೇತುವೆ ದಾಟಲು ಪ್ರಯತ್ನಿಸಿದ್ದಾರೆ. ಆಗ ನೀರಿನ ರಭಸಕ್ಕೆ ಆ ನಾಲ್ವರು ಬೈಕ್ ಗಳ ಸಮೇತ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದು, ಜೆಸಿಬಿ ಸಹಾಯದಿಂದ ದ್ವಿಚಕ್ರ ವಾಹನಗಳನ್ನು ಹೊರತೆಗೆಯಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.