ಬೆಂಗಳೂರು: ಸೈಟ್ ವಿಚಾರವಾಗಿ ಮಾತುಕತೆಗೆ ಕರೆಸಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಚೆನ್ನಸಂದ್ರದಲ್ಲಿ ನಡೆದಿದೆ.
ಮಂಜುನಾಥ್ ಎಂಬಾತನ ಮೇಲೆ ಅಭಿ ಹಾಗೂ ಅವನ ಗ್ಯಾಂಗ್ ದಾಳಿ ನಡೆಸಿದ್ದು, ಬಿಯರ್ ಬಾಟಲ್ನಿಂದ ಹಣೆಯ ಭಾಗಕ್ಕೆ ಹೊಡೆದು, ಕೈಗಳಿಂದ ಮುಖ ಮತ್ತು ಎದೆ ಭಾಗಕ್ಕೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ಮಂಜುನಾಥ್ಗೆ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ಸೈಕಲ್ನಲ್ಲಿ ಆಟವಾಡ್ತಿದ್ದ ಬಾಲಕನಿಗೆ ಸಾಕು ನಾಯಿ ಡೆಡ್ಲಿ ಅಟ್ಯಾಕ್



















