ಬಾಗಲಕೋಟೆ: ಜಿಲ್ಲೆಯಲ್ಲಿ ಇತ್ತೀಚೆಗೆ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಖದೀಮರ ಕೃತ್ಯಕ್ಕೆ ಜನ ಭಯಭೀತರಾಗುತ್ತಿದ್ದಾರೆ.
ಚಿಂದಿ ಆಯುವ ನೆಪದಲ್ಲಿ ದೇವರ ವಿಗ್ರಹವನ್ನೇ ಕದ್ದು ಪರಾರಿಯಾಗುತ್ತಿದ್ದಾರೆ. ಮನೆ, ಅಂಗಡಿಗಳ ಬೀಗ ಮುರಿದು ಸ್ಟೀಲ್, ವೈಯರ್ ಗಳನ್ನು ದೋಚುತ್ತಿದ್ದಾರೆ. ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾಂಪ್ಲೆಕ್ಸ್ ನ ವ್ಯಾಪಾರಸ್ಥರು ಪೂಜೆ ಮಾಡಲು ಪ್ರತಿಷ್ಠಾಪಿಸಿದ್ದ 10 ರಿಂದ 15 ಕೆಜಿ ತೂಕದ ಕಂಚಿನ ಗಣೇಶ ವಿಗ್ರಹವನ್ನು ಮಹಿಳೆಯೊಬ್ಬಳು ಕದ್ದು ಪರಾರಿಯಾಗಿದ್ದಾಳೆ. ಮತ್ತೊಂದು ಕಡೆ ಸ್ಟೋರ್ ರೂಂ ಬೀಗ ಮುರಿದು ಅಲ್ಲಿದ್ದ ವೈಯರ್ ಬಂಡಲ್ ಕಳುವು ಮಾಡಿ ಎಸ್ಕೇಪ್ ಆಗಿದ್ದಾರೆ.
ಕಳ್ಳತನದ ಸಿಸಿ ಕ್ಯಾಮೆರಾದ ದೃಶ್ಯಗಳನ್ನು ಪೊಲೀಸರಿಗೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.