ಬೆಂಗಳೂರು: ಶಬರಿಮಲೆ ಯಾತ್ರೆ ಕೈಗೊಳ್ಳುವ ಭಕ್ತರಿಗೆ ಸಾರಿಗೆ ಸಂಸ್ಥೆ ಗುಡ್ ನ್ಯೂಸ್ ನೀಡಿದೆ.
ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗೆ ಅನುಕೂಲಕ್ಕಾಗಿ ಹೊಸದಾಗಿ ವೋಲ್ವೋ ಬಸ್ ಸೇವೆ ಆರಂಭಿಸಿದೆ. ಈ ಕುರಿತು ಸಾರಿಗೆ ಇಲಾಖೆ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ನ. 29ರಿಂದ ಹೊಸ ವೋಲ್ವೋ ಬಸ್ ಸಂಚಾರ ಆರಂಭವಾಗಲಿದ್ದು, ಬೆಂಗಳೂರಿನಿಂದ-ನೀಲಕ್ಕಲ್ (ಪಂಪಾ-ಶಬರಿಮಲೈ) ವರೆಗೆ ಓಡಾಟ ನಡೆಸಲಿದೆ ಎಂದು ತಿಳಿಸಿದೆ.
ನ. 29 ರಿಂದ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ಬಸ್ ಸೇವೆ ಆರಂಭವಾಗಲಿದೆ. ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಬಸ್ ಹೊರಟು, ಮರುದಿನ ಬೆಳಗ್ಗೆ 6.45ಕ್ಕೆ ನೀಲಕ್ಕಲ್ ತಲುಪುತ್ತದೆ. ನೀಲಕ್ಕಲ್ನಿಂದ ಸಂಜೆ 6 ಗಂಟೆಗೆ ಹೊರಡುವ ಬಸ್ ಮರುದಿನ ಬೆಳಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ. ಪ್ರಯಾಣ ದರ ವಯಸ್ಕರಿಗೆ 1,750 ರೂ. ಫಿಕ್ಸ್ ಮಾಡಲಾಗಿದೆ.
ಕರ್ನಾಟಕದಿಂದ ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಿದೆ.